Home Blog

ಡಿ.6 ರಂದು ಚೈತನ್ಯ ಕಲಾವಿದರಿಂದ ರಾಘು ಮೇಸ್ಟ್ರು ನಾಟಕ ಪ್ರದರ್ಶನ

0

ಚೈತನ್ಯ ಕಲಾವಿದರು ಬೈಲೂರು ಇವರ ತಂಡದಿಂದ ಈ ವರ್ಷದ ನೂತನ ಹಾಸ್ಯಮಯ ನಾಟಕ ರಾಘು ಮೇಸ್ಟ್ರು ಉಚಿತ ಪ್ರದರ್ಶನವು ಡಿ.6ರಂದು ಸಂಜೆ 6 ಗಂಟೆಗೆ ಕಾರ್ಕಳದ ಗಾಂಧಿ ಮೈದಾನ ಬಳಿಯ ಕ್ರೈಸ್ಟ್ ಕಿಂಗ್ ಚರ್ಚ್ ಕ್ಯಾಂಪಸ್ ನಲ್ಲಿ ನಡೆಯಲಿದೆ.

ಎಕ್ಸೆಲೆನ್ಸ್ ಡಿಗ್ರಿ ಕಾಲೇಜು ಮೂಡಬಿದ್ರೆ, ಹೋಟೆಲ್ ಕಾರ್ಕಳ ಇನ್ ಅನಘ ಗ್ರಾಂಡ್ , ಬಲ್ಮಠ ಫೌಂಡೇಶನ್, ಬಾಲಾಜಿ ಮೊಬೈಲ್ಸ್ ಕಾರ್ಕಳ, ನಿತ್ಯಾನಂದ ಎಲೆಕ್ಟ್ರಿಕಲ್ಸ್, ವಿಜಯಾನಂದ ಎಲೆಕ್ಟ್ರಿಕಲ್ಸ್ ಕಾರ್ಕಳ, ಜೆಎಂಜೆ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನಿಚರ್ಸ್ ಕಾರ್ಕಳ, ದೈವಾನುಗ್ರಹ ಟೂರ್ಸ್ ಅಂಡ್ ಟ್ರಾವೆಲ್ಸ್ ಜೋಡುರಸ್ತೆ ಅವರ ಸಹಕಾರದೊಂದಿಗೆ ಈ ಉಚಿತ ಪ್ರದರ್ಶನ ನಡೆಯಲಿದೆ.

ಪ್ರಸನ್ನ ಶೆಟ್ಟಿ ಬೈಲೂರುರವರ ಸಾರಥ್ಯ, ಕಥೆ, ನಿರ್ದೇಶನದಲ್ಲಿ ನಾಟಕ ಮೂಡಿಬಂದಿದೆ. ಕಿರಣ್ ಗರಡಿಮಜಲು ಸಂಗೀತ, ಉಮೇಶ್ ಪರಪು ರಂಗವಿನ್ಯಾಸ, ನಿಧೀಶ್ ಸೌಂಡ್ಸ್ ರಂಗನಪಲ್ಕೆ ಧ್ವನಿ ಮತ್ತು ಬೆಳಕು ನೀಡಿ ನಾಟಕ ರಚನೆಗೆ ಸಹಕರಿಸಿದ್ದಾರೆ.

ನಾಟಕ ವೀಕ್ಷಣೆಗೆ ಉಚಿತ ಪ್ರವೇಶವಾಗಿದ್ದು, ಕಲಾಭಿಮಾನಿಗಳೆಲ್ಲರೂ ಬಂದು ನಾಟಕ ವೀಕ್ಷಿಸಿ ಪ್ರೋತ್ಸಾಹಿಸಬೇಕಾಗಿ ಚಿತ್ರ ತಂಡ ವಿನಂತಿಸಿದೆ.

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ “ಕ್ರಿಯೇಟಿವ್ ಆವಿರ್ಭವ – ಸಿಂದೂರ ಸಂಭ್ರಮ ” ವಾರ್ಷಿಕೋತ್ಸವ ಸಮಾರಂಭ

0

ಡಿ. 4ರಿಂದ 6ರವರೆಗೆ ಸಾಂಸ್ಕೃತಿಕ ವೈಭವ

ಕರ್ನಾಟಕದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಭೂಮಿಕೆಯನ್ನು ಶ್ರೀಮಂತಗೊಳಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಮಹೋತ್ಸವ “ಕ್ರಿಯೇಟಿವ್ ಆವಿರ್ಭವ–2025” ಡಿ. 4, 5 ಮತ್ತು 6 ರಂದು ವೈಭವದೊಂದಿಗೆ ನಡೆಯಲಿದೆ.

ಈ ಮೂರು ದಿನಗಳ ಸಂಭ್ರಮವು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಕ್ಯಾಂಪಸ್‌ನಲ್ಲಿ ವಿವಿಧ ಸಾಂಸ್ಕೃತಿಕ, ವಿದ್ಯಾಭ್ಯಾಸಿಕ ಮತ್ತು ಮನರಂಜನಾ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಲಿದೆ.

ಡಿ. 4 ರಂದು – ಸಂಜೆ 6.00 ಗಂಟೆಗೆ ಕಾರ್ಯಕ್ರಮಕ್ಕೆ ಭವ್ಯ ಚಾಲನೆ ನೀಡಲಿದ್ದು, ಸಾಂಸ್ಕೃತಿಕ ಸಂಭ್ರಮದ ಉದ್ಘಾಟನೆ ನಡೆಯಲಿದೆ. ಕರಾವಳಿಯ ಸಾಂಪ್ರದಾಯಿಕ ಕಲಾ ವೈಭವ, ಯಕ್ಷಗಾನ, ನೃತ್ಯ, ನಾಟಕ ಹಾಗೂ ಜಾನಪದ ಕಲಾಪ್ರದರ್ಶನಗಳು ಮುಖ್ಯ ಆಕರ್ಷಣೆಯಾಗಿವೆ. ಡಿ. ೫ – ಮಧ್ಯಾಹ್ನ 2.30 ರಿಂದ ವಿವಿಧ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸಂಜೆ ಹಾಗೂ ವಿಶೇಷ ಅತಿಥಿ ಉಪನ್ಯಾಸಗಳು ನಡೆಯಲಿವೆ.

ಡಿ. 6 – ಬೆಳಗ್ಗೆ 10.30 ಕ್ಕೆ ಸಾಧಕರಿಗೆ ಗೌರವ ಸಮರ್ಪಣೆ, ಸನ್ಮಾನ್ಯ ಅತಿಥಿಗಳಿಂದ ಸಂದೇಶಗಳು ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಸಾವಿರಾರು ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಈ ಸಾಂಸ್ಕೃತಿಕ ಹಬ್ಬಕ್ಕೆ ಸಾಕ್ಷಿಯಾಗಲಿದ್ದಾರೆ.

ಆಕರ್ಷಣೀಯ ಕಾರ್ಯಕ್ರಮಗಳು:
4 ರಂದು ಸಂಜೆ 6.00ರಿಂದ ‘ಕ್ರಿಯೇಟಿವ್ ಯಕ್ಷಾರಾಧನಮ್’ ಹವ್ಯಾಸಿ ಕಲಾವಿದರಿಂದ ʼ ಶ್ರೀರಾಮಾನುಗ್ರಹ ಸಿಂದೂರ ವಿಜಯ” ಯಕ್ಷಗಾನ ಪ್ರದರ್ಶನ.
5 ರಂದು ಅಪರಾಹ್ನ 2:30 ರಿಂದ ದಿ. ಎಚ್. ಎಸ್ ವೆಂಕಟೇಶಮೂರ್ತಿಯವರ ಕುರಿತು ಭಾವ ನಮನ ಕಾರ್ಯಕ್ರಮ. ಸಂಜೆ 7.00ರಿಂದ ಪ್ರಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್ ರವರಿಂದ ಮ್ಯಾಜಿಕ್ ಶೋ. 6 ರಂದು ಅಪರಾಹ್ನ 12.15 ರಿಂದ ಕ್ರಿಯೇಟಿವ್ ಸಾಹಿತ್ಯ ಸಾಂಗತ್ಯ ಸಂವಾದ: ಚುಟುಕುಬ್ರಹ್ಮ ಎಚ್. ಡುಂಡಿರಾಜ್ ರವರ ಉಪಸ್ಥಿತಿಯಲ್ಲಿ ಮಾತು ಕ(ವಿ)ತೆ.

ವಾರ್ಷಿಕೋತ್ಸವ ಸಮಾರಂಭದ ಸಂಪನ್ಮೂಲ ವ್ಯಕ್ತಿಗಳಾಗಿ ವೀರಪ್ಪ ಮೊಯ್ಲಿ ಮಾಜಿ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ, ವಿ. ಸುನಿಲ್ ಕುಮಾರ್ ಶಾಸಕರು, ಕಾರ್ಕಳ ವಿಧಾನಸಭಾ ಕ್ಷೇತ್ರ, ಎಚ್. ಡುಂಡಿರಾಜ್ ಕನ್ನಡದ ಪ್ರಖ್ಯಾತ ಹಾಸ್ಯ ಕವಿ ಹಾಗೂ ನಾಟಕಕಾರರು, ಡಾ. ಎಚ್.ಎಸ್ ಬಲ್ಲಾಳ್ ಆಡಳಿತಗಾರರು, ರೇಡಿಯೋಲಜಿ ತಜ್ಞರು, ಮಣಿಪಾಲ ವಿ.ವಿಯ ಪ್ರೊ- ಚಾನ್ಸಲರ್ ಹಾಗೂ ಅಧ್ಯಕ್ಷರು, ಡಾ. ಜಿ. ರಾಮಕೃಷ್ಣ ಆಚಾರ್, ಸ್ಥಾಪಕರು ಎಸ್. ಕೆ.ಎಫ್ ಎಲಿಕ್ಸರ್ ಇಂಡಿಯಾ ಮತ್ತು ಸಂಜೀವಿನಿ ಗೋಧಾಮ, ಮುನಿಯಾಲು, ಕೆ. ಗುಣಪಾಲ್ ಕಡಂಬ ವಿಶ್ರಾಂತ ಪ್ರಾಚಾರ್ಯರು, ಸಂಘಟನಾ ಕಾರ್ಯದರ್ಶಿಗಳು ಮಿಯ್ಯಾರು ಕಂಬಳ ಸಮಿತಿ, ಶನಿಲ್ ಗೌತಮ್, ಖ್ಯಾತ ನಟರು, ಸೋ ಫ್ರಂ ಸೋ ಖ್ಯಾತಿ ಇವರು ಆಗಮಿಸಲಿದ್ದಾರೆ.

ಈ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಹಬ್ಬಕ್ಕೆ ಎಲ್ಲಾ ನಾಗರಿಕರು, ಶಿಕ್ಷಣ ಪ್ರೇಮಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಆಹ್ವಾನಿಸಿದೆ.

 

ಬೈಲೂರು: ನಿವೃತ ಉಪನ್ಯಾಸಕ ದಿವಂಗತ ಶಾಂತಿನಾಥ ಜೋಗಿ ಇವರ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮ

0

 

ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸುಧೀರ್ಘ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ದಿವಂಗತ ಶಾಂತಿನಾಥ ಜೋಗಿ ಇವರ ಸ್ಮರಣಾರ್ಥ ಅವರ ಮಕ್ಕಳಾದ ಪವನ್ ಜೋಗಿ, ಪಲ್ಲವಿ ಹಾಗೂ ಸೊಸೆ ಆರಬಿ ಜೋಗಿ ಇವರು ಇತಿಹಾಸದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಸಂಸ್ಥೆಯಲ್ಲಿ ಡಿ.3 ರಂದು ಏರ್ಪಡಿಸಿದ್ದರು.

ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪುಂಡಿಕಾಯಿ ಗಣಪಯ್ಯ ಭಟ್, ನಿವೃತ್ತ ಇತಿಹಾಸ ಪ್ರಾಧ್ಯಾಪಕರು, ಧವಳ ಕಾಲೇಜು ಮೂಡಬಿದ್ರೆ , ಆಗಮಿಸಿ ಇತಿಹಾಸದ ಮಹತ್ವ ಹಾಗೂ ಪ್ರಸ್ತುತತೆಯ ಬಗ್ಗೆ ಸಂಸ್ಥೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸೀತಾರಾಮ್ ಇವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಯಾದ ರಮೇಶ್ ಕಲ್ಲೊಟ್ಟೆ ಹಾಗೂ ಬಿ.ಇ.ಎಂ. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ಇವರು ಭಾಗವಹಿಸಿದ್ದರು. ಹಿರಿಯ ಉಪನ್ಯಾಸಕರಾದ ಗೋಪಾಲಕೃಷ್ಣ ಗೋರೆ ಕಾರ್ಯಕ್ರಮದ ಔಚಿತ್ಯತೆಯ ಬಗ್ಗೆ ತಿಳಿಸಿದರೆ, ಅತಿಥಿಗಳ ಪರಿಚಯವನ್ನು ಉಪನ್ಯಾಸಕ ನರಸಿಂಹ ವರ್ಧನ್ ಮಾಡಿದರು.

ವಿದ್ಯಾರ್ಥಿಗಳಾದ ಕುಮಾರ್ ತೇಜಾಕ್ಷ ಸ್ವಾಗತಗೈದರೆ, ಕುಮಾರ್ ಪ್ರಸಾದ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮ ನಿರ್ವಹಣೆಯನ್ನು ಕುಮಾರಿ ಲೆನಿಶಾ ನಡೆಸಿಕೊಟ್ಟರು.

ವಿಶ್ವ ಏಡ್ಸ್ ದಿನಾಚರಣೆ – 2025 : ರೋಟರಿ ಕ್ಲಬ್ ಕಾರ್ಕಳ – ಸಂಯುಕ್ತ ಆಶ್ರಯದಲ್ಲಿ ಜನಜಾಗ್ರತಿ ಜಾಥಾ ಕಾರ್ಯಕ್ರಮ

0

ಕರ್ನಾಟಕ ಸರ್ಕಾರ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಸರಕಾರಿ ಶುಶ್ರೂಷ ಮಹಾವಿದ್ಯಾಲಯ ಕಾರ್ಕಳ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆ ಮತ್ತು ರೋಟರಿ ಕ್ಲಬ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ – 2025ರ ಅಂಗವಾಗಿ ಜನಜಾಗ್ರತಿ ಜಾಥಾ ಕಾರ್ಕಳದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ಜಡ್ಜ್ ಮತ್ತು ACJM ನ್ಯಾಯಾಧೀಶರು, ಕಾರ್ಕಳ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಶರ್ಮಿಳಾ ಸಿ.ಎಸ್., ಉದ್ಘಾಟಿಸಿದರು. “ಎಚ್‌ಐವಿ/ಏಡ್ಸ್ ರೋಗ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆತಡೆಗಳನ್ನು ಕೊನೆಗಾಣಿಸೋಣ.” ಎಂಬ ಘೋಷವಾಕ್ಯದೊಂದಿಗೆ ಜಾಥಾ ಆರಂಭಗೊಂಡಿತು.

ಕಾರ್ಯಕ್ರಮದ ಭಾಗವಾಗಿ, ಜಾಥಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳದಿಂದ ಪ್ರಾರಂಭವಾಗಿ ಬಸ್ ಸ್ಟ್ಯಾಂಡ್ ಸರ್ಕಲ್, ನಂತರ ಅನಂತಶಯನ ಸರ್ಕಲ್ ಮೂಲಕ ಸಾಗುತ್ತಾ ಪುನಃ ಆಸ್ಪತ್ರೆ ಆವರಣಕ್ಕೆ ತಲುಪಿತು. ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಗಳು, ಸ್ವಯಂಸೇವಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉತ್ಸಾಹಭರಿತವಾಗಿ ಭಾಗವಹಿಸಿದರು. ಜಾಗೃತಿಯೇ ಏಡ್ಸ್ ನಿಯಂತ್ರಣದ ಪ್ರಮುಖ ಆಯುಧ ಎಂಬ ಸಂದೇಶದೊಂದಿಗೆ ಜಾಥಾ ಯಶಸ್ವಿಯಾಗಿ ನೆರವೇರಿತು.

ಈ ಕಾರ್ಯಕ್ರಮದಲ್ಲಿ ಕಾರ್ಕಳದ ಹೆಚ್ಚುವರಿ ಸಿವಿಲ್ ಜಡ್ಜ್ &JMFC ನ್ಯಾಯಾಧೀಶರಾದ ಗೀತಾ, ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆಯ ಡಾ. ಕೆ.ಆರ್. ಜೋಶಿ, ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷ ಕೆ. ನವೀನ್ ಚಂದ್ರ ಶೆಟ್ಟಿ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಶಿಕಲಾ, ಸರಕಾರಿ ಶುಶ್ರೂಷ ಮಹಾವಿದ್ಯಾಲಯದ ಪ್ರಾಚಾರ್ಯೆ ಸಜನಿ ಸುಬ್ರಮಣ್ಯ, ಆರೋಗ್ಯ ನಿರೀಕ್ಷಣಾಧಿಕಾರಿ ಲೈಲಾ ಥಾಮಸ್, ಪುರಸಭೆ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕಾರ್ಕಳ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಸುಶೀಲ ಕೆ ಯವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಐತಿಹಾಸಿಕ ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಪೂರ್ವಭಾವಿ ಸಿದ್ದತೆ ಆರಂಭ

0

ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸರಕಾರಕ್ಕೆ ಮನವಿ -ವಿ ಸುನಿಲ್‌ ಕುಮಾರ್

ಉಡುಪಿ ಜಿಲ್ಲೆ ಕಾರ್ಕಳ ವಿಧಾನಸಭಾ ಕ್ಷೇತ್ರವು ಜೈನ ಸಮುದಾಯದ ಐತಿಹಾಸಿಕ ಹೆಗ್ಗುರುತುಗಳಾದ ಕಾರ್ಕಳ ಶ್ರೀ ಗೊಮ್ಮಟೇಶ್ವರ ಏಕಶಿಲಾ ಪ್ರತಿಮೆ, ಚತುರ್ಮುಖ ಬಸದಿ, ಆನೆಕೆರೆ ಚತುರ್ಮುಖ ಕೆರೆ ಬಸದಿ, ವರಂಗ ಚತುರ್ಮುಖ ಕೆರೆ ಬಸದಿ, ನಲ್ಲೂರು ಶ್ರೀ ಕೂಷ್ಮಾಂಡಿನಿ ಜೈನ ಬಸದಿಯಂತಹ ಜೈನ ಧಾರ್ಮಿಕ ಕ್ಷೇತ್ರಗಳು ಸೇರಿದಂತೆ ಹತ್ತು ಹಲವು ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದೆ. ಧಾರ್ಮಿಕ ನಂಬಿಕೆಗಳ ಜೊತೆಗೆ ಆಕರ್ಷಣೀಯ ಪ್ರಾಕೃತಿಕ ಸೌಂದರ್ಯದಿಂದಾಗಿ ನಮ್ಮ ಹಲವು ಜೈನ ಬಸದಿಗಳು ವರ್ಷಪೂರ್ತಿ ಯಾತ್ರಾರ್ಥಿಗಳನ್ನು, ಭಕ್ತರನ್ನು ಹಾಗೂ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಮುಂದಿನ ವರ್ಷ 2027 ಜನವರಿಯಲ್ಲಿ 12 ವರ್ಷಗಳಿಗೆ ಒಮ್ಮೆ ನಡೆಯುವ ವಿಶ್ವ ವಿಖ್ಯಾತ, ಐತಿಹಾಸಿಕ ಶ್ರೀ ಗೊಮ್ಮಟೇಶ್ವರ ಸ್ವಾಮಿಯ ಮಹಾ ಮಸ್ತಕಾಭಿಷೇಕ ನಡೆಯಲಿರುವುದರಿಂದ ದೇಶ ವಿದೇಶಗಳಿಂದ ಆನೇಕ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರು ಆಗಮಿಸಲಿದ್ದಾರೆ.

ಐತಿಹಾಸಿಕ ಮಹಾ ಮಸ್ತಕಾಭೀಷೇಕ ಮಹೋತ್ಸವ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಆಗಮಿಸುವ ಹಿನ್ನಲೆಯಲ್ಲಿ ಕಾರ್ಕಳ ನಗರವನ್ನು ಸಂಪರ್ಕಿಸುವ ಮುಖ್ಯರಸ್ತೆಗಳು, ನಗರದ ಎಲ್ಲಾ ರಸ್ತೆಗಳು, ಒಳಚರಂಡಿ ವ್ಯವಸ್ಥೆ, ಅಲಂಕಾರಿಕ ವಿದ್ಯುತ್‌ ದೀಪಗಳ ಅಳವಡಿಕೆ ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸುವ ಯಾತ್ರಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾತ್ರಿ ನಿವಾಸ, ಅನ್ನ ಛತ್ರಗಳನ್ನು ಒಳಗೊಂಡ ಸುಸಜ್ಜಿತ ಸಭಾಭವನಗಳ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಈಗಾಗಲೇ ಹಲವು ಯೋಜನೆಗಳನ್ನು ರೂಪಿಸಲಾಗಿದೆ.

ಮಹಾ ಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳು, ಭಕ್ತರು ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಸುಸ್ಸಜ್ಜಿತ ಅನ್ನ ಛತ್ರ ಸಹಿತ ಸಭಾ ಭವನ ನಿರ್ಮಾಣ ಮಾಡುವುದು ಅತೀ ಅವಶ್ಯಕವಾಗಿರುವ ಕಾರಣ ಕಾರ್ಕಳ ಗೊಮ್ಮಟ ಬೆಟ್ಟದ ಬಳಿ ಮತ್ತು ನಲ್ಲೂರು ಕೂಷ್ಮಾಂಡಿನಿ ಜೈನ ಬಸದಿ ಬಳಿ ಮತ್ತು ವರಂಗ ಜೈನ ಬಸದಿ ಬಳಿ ಸಭಾ ಭವನಗಳ ನಿರ್ಮಾಣಕ್ಕೆ ಈಗಾಗಲೇ ಅನುದಾನ ಬಿಡುಗಡೆಗಾಗಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದ್ದು ಅನುದಾನ ಶೀಘ್ರದಲ್ಲಿಯೇ ಬಿಡುಗಡೆಯಾಗುವ ಹಂತದಲ್ಲಿರುತ್ತದೆ. ಈ ಮೂಲಕ ಕಾರ್ಕಳ ಮಹಾಮಸ್ತಕಾಭಿಷೇಕ ಪೂರ್ವಭಾವಿ ತಯಾರಿಗಳು ಆರಂಭಗೊಂಡಿವೆ ಎಂದು ಶಾಸಕರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರೈಸ್ಟ್ ಕಿಂಗ್ : ವಿಶ್ವಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ಭಾರತ ರಾಷ್ಟ್ರೀಯ ತಂಡದ ನಾಯಕಿಯಾಗಿ ಒಂಬತ್ತನೇ ತರಗತಿಯ ಶಗುನ್ ಎಸ್ ವರ್ಮ ಹೆಗ್ಡೆ ಆಯ್ಕೆ

0

 

ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಶಗುನ್ ಎಸ್. ವರ್ಮ ಹೆಗ್ಡೆ ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್‌ನವರು ನಡೆಸುವ 15ರ ವಯೋಮಿತಿಯ ವಿಶ್ವಾಶಾಲಾ ಮಕ್ಕಳ ಬಾಲಕಿಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ಭಾರತ ರಾಷ್ಟ್ರೀಯ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ.

ಇವಳು 15ರ ವಯೋಮಿತಿಯ ಭಾರತೀಯ ವಾಲಿವಾಲ್ ತಂಡಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಆಟಗಾರ್ತಿ. ಅಂತರಾಷ್ಟ್ರೀಯ ಪಂದ್ಯವು ಇಂದಿನಿಂದ
(ಡಿ. 3) ರಿಂದ 13 ನೇ ತಾರೀಖಿನವರೆಗೆ ಚೀನಾದ ಶಾಂಗ್ಲೋದಲ್ಲಿ ನಡೆಯಲಿದ್ದು, ಶಗುನ್ ಎಸ್ ವರ್ಮ ಹೆಗ್ಡೆ ಭಾರತ ತಂಡವನ್ನು ಪ್ರತಿನಿಧಿಸುವ ಕಾರ್ಕಳದ ಹೆಮ್ಮೆಯ ಕ್ರೀಡಾಪಟುವಾಗಿದ್ದಾಳೆ. ಈಕೆ ಕಲ್ಲೊಟ್ಟೆ ನಿವಾಸಿ ಸಂದೇಶ್ ವರ್ಮ ಹಾಗೂ ಶ್ರೀಮತಿ ಶ್ರುತಿರಾಜ್ ದಂಪತಿಗಳ ಸುಪುತ್ರಿಯಾಗಿದ್ದಾಳೆ.

 

 

ವಿಶ್ವ ಕಬಡ್ಡಿ ಚಾಂಪಿಯನ್ ಆಗಿ ಬಂದ ಧನಲಕ್ಷಿ ಅವರನ್ನು ತಾಯ್ನಾಡಿಗೆ ಸ್ವಾಗತಿಸಿದ ಕಾರ್ಕಳ ಹಿ.ಜಾ.ವೇ ಕಾರ್ಯಕರ್ತರು

0

ದಕ್ಷಿಣ ಕನ್ನಡ ಜಿಲ್ಲೆಯ ಹಿರಿಮೆಯನ್ನು ಬಾನೆತ್ತರಕ್ಕೆ ಹಾರಿಸಿದ, 2025 ರ ವಿಶ್ವ ಕಪ್ ಮಹಿಳಾ ಸೀನಿಯರ್ ಕಬಡ್ಡಿಯಲ್ಲಿ ಭಾರತ ತಂಡದ ಪರವಾಗಿ ಪ್ರತಿನಿಧಿಸಿದ ದಕ್ಷಿಣ ಭಾರತದ ಏಕೈಕ ಮಹಿಳೆ, ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದ ಸುರತ್ಕಲ್ ಮೂಲದ ಧನಲಕ್ಷ್ಮಿ ಪೂಜಾರಿ ಸುರತ್ಕಲ್ ಇವರನ್ನು ಕಾರ್ಕಳ ಹಿಂ.ಜಾ.ವೇ. ಕಾರ್ಯಕರ್ತರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಬಾಂಗ್ಲಾದೇಶದ ಡಾಕಾದಲ್ಲಿ ನಡೆದ 2ನೇ ಮಹಿಳಾ ಕಬ್ಬಡಿ ವಿಶ್ವಕಪ್ ಪಂದ್ಯಾಟದಲ್ಲಿ ಚಾಂಪಿಯನ್ ಆದ ಭಾರತ ತಂಡವನ್ನು ಪ್ರತಿನಿಧಿಸಿ ವಿಜಯಗಳಿಸಿದ ಮೂಲತಃ ಕಾರ್ಕಳ ಮಿಯ್ಯಾರು ಗ್ರಾಮದವರಾದ ಇವರು, ಪ್ರಸ್ತುತ ಸುರತ್ಕಲ್ ಗುಡ್ಡೆಕೊಪ್ಪದ ನಿವಾಸಿಯಾಗಿದ್ದಾರೆ.

ಧನಲಕ್ಷ್ಮೀ ತನ್ನ ಆಲ್‌ರೌಂಡರ್ ಆಟದಿಂದ ತಂಡದಲ್ಲಿ ಬಹುಬೇಡಿಕೆಯ ಕ್ರೀಡಾಪಟುವಾಗಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಯೊಂದಿಗೆ ಡಿಪ್ಲೋಮಾ ಕೋರ್ಸ್‌ಗಳನ್ನು ಸಂಪೂರ್ಣ ಕ್ರೀಡಾ ದತ್ತು ಶಿಕ್ಷಣ ಯೋಜನೆಯಲ್ಲಿ ಉಚಿತವಾಗಿ ಪಡೆದಿದ್ದಾರೆ.

ಇದುವರೆಗೆ 12 ಬಾರಿ ರಾಜ್ಯವನ್ನು ಪ್ರತಿನಿಧಿಸಿದ್ದರು. ಜೂನಿಯರ್‌, ಸೀನಿಯರ್‌, ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ದಕ್ಷಿಣಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಸಹಕಾರ ಸ್ಮರಿಸಲಾಗಿದೆ.

ಆಳ್ವಾಸ್ ಮೂಡುಬಿದಿರೆ ಕಾಲೇಜಿನ ವಿದ್ಯಾರ್ಥಿನಿ. ಅತ್ಯದ್ಬುತ ಸಾಧನೆಯನ್ನು ಮಾಡಿ ಕೋಟ್ಯಾಂತರ ಕ್ರೀಡಾಭಿಮಾನಿಗಳ ಹೃದಯ ಗೆದ್ದ ಯಶಸ್ವಿ ಸಾಧಕಿ ಎಂಬ ಹೆಗ್ಗಳಿಕೆಯನ್ನು ಇವರು ಪಡೆದಿದ್ದಾರೆ.

ಉಡುಪಿ: ನಾಳೆ(ಡಿ.2) ಜೈ ಬಾಪೂ-ಜೈ ಭೀಮ್-ಜೈ ಸಂವಿಧಾನ ಕಾರ್ಯಕ್ರಮ

0

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಕಾರ್ಯಕ್ರಮದನ್ವಯ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಆಶ್ರಯದಲ್ಲಿ, ‘ಜೈ ಬಾಪೂ-ಜೈ ಭೀಮ್-ಜೈ ಸಂವಿಧಾನ _ ಕಾರ್ಯಕ್ರಮವು, ದಿನಾಂಕ – 02/12/2025 ಮಂಗಳವಾರದಂದು, ಬೆಳಿಗ್ಗೆ ಗಂಟೆ – 10.30 ಕ್ಕೆ, ಉಡುಪಿ – ಪುರಭವನದಲ್ಲಿ ಸಭಾಂಗಣ ದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ,ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷರುಗಳಾದ ಕಿಮ್ಮನೆ ರತ್ನಾಕರ್, ಅಬ್ದುಲ್ ಮುನೀರ್ ಜನ್ಸಾಲೆ, ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರರಾದ ಸುಧೀರ್ ಕುಮಾರ್ ಮುರೊಳ್ಳಿ ಮತ್ತು ಖ್ಯಾತ ಕನ್ನಡ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕರಾದ ಎಸ್. ನಾರಾಯಣ್ ರವರು ಭಾಗವಹಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಕಾರ್ಯಧ್ಯಕ್ಷ ಹಾಗು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ,ಮಾಜಿ ಸಚಿವ ಜಯ ಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಮಾಜಿ ಶಾಸಕ ಸುಕುಮಾರ್ ಶೆಟ್ಟಿ,ಕೆಪಿಸಿಸಿ ಉಪಾಧ್ಯಕ್ಷ ಹಾಗು ಕರಾವಳಿ ಅಭಿವೃಧ್ಧಿ ಮಂಡಳಿ ಅಧ್ಯಕ್ಷ ಎಂ. ಎ ಗಫೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಾರಾಯಣ ಗುರು ಅಭಿವೃಧ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೋ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಜ್ಯೋತಿ ಹೆಬ್ಬಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಧ್ಯಕ್ಷ ಕಿಶನ್ ಹೆಗ್ಡೆ, ಏಳು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ,ಉಪಾಧ್ಯಕ್ಷರು ಸದಸ್ಯರು, ಪಕ್ಷದ ಜಿಲ್ಲೆಯ ಎಲ್ಲ ನಾಯಕರು, ಜಿಲ್ಲೆಯ ಎಲ್ಲಾ ಮುಖಂಡರು, ಐದು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಉಭಯ ಬ್ಲಾಕ್ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್. ಎಸ್. ಯು. ಐ, ಇಂಟಕ್, ಕಿಸಾನ್ ಕಾಂಗ್ರೆಸ್, ಅಲ್ಪಸಂಖ್ಯಾತರ ಘಟಕ, ಹಿಂದುಳಿದ ವರ್ಗಗಳ ಘಟಕ, ಎಸ್. ಸಿ / ಎಸ್. ಟಿ ಘಟಕ, ಸಾಮಾಜಿಕ ಜಾಲತಾಣ ಘಟಕ, ಕಾಂಗ್ರೆಸ್ ಮೀನುಗಾರರ ಘಟಕ, ಇನ್ನಿತರ ವಿವಿಧ ಘಟಕ / ಸಮಿತಿ / ವಿಭಾಗ ಗಳ ಅಧ್ಯಕ್ಷರು / ಪದಾಧಿಕಾರಿಗಳು, ಜಿಲ್ಲೆಯ ಎಲ್ಲ ಘಟಕದ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರ ಹಾಗು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು,ಗ್ರಾಮೀಣ ಕಾಂಗ್ರೆಸ್ ಮತ್ತು ಬೂತ್ ಸಮಿತಿಗಳ ಅಧ್ಯಕ್ಷರು /ಪದಾಧಿಕಾರಿಗಳು, ಬಿ. ಎಲ್. ಎ -2 ಗಳು, ವಿವಿಧ ಸ್ತರದ ಸ್ಥಳೀಯಾಡಳಿತ ಸಂಸ್ಥೆಗಳ ಹಾಲಿ ಹಾಗೂ ಮಾಜಿ ಸದಸ್ಯರುಗಳು ಭಾಗವಹಿಸಲಿದ್ದಾರೆ.

ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಮತ್ತು ಉಪಾಧ್ಯಕ್ಷ ದಿನಕರ ಶೆಟ್ಟಿ ಜಂಟಿಯಾಗಿ ಮನವಿ ಮಾಡಿದ್ದಾರೆ.

 

ಕಾಂತಾರ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದ ನಟ ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಬಾಲಿವುಡ್‌ ನಟ ರಣವೀರ್‌ ಸಿಂಗ್‌

0

ಕಾಂತಾರ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದ ನಟ

ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಬಾಲಿವುಡ್‌ ನಟ ರಣವೀರ್‌ ಸಿಂಗ್‌

ತುಳುನಾಡಿನ ದೈವಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಅಪಮಾನ ಮಾಡಿದ್ದಾರೆ. ರಿಷಬ್‌ ಶೆಟ್ಟಿ ನಟನೆಯನ್ನು ಹೊಗಳಲು ಮುಂದಾಗಿ ಬಾಲಿವುಡ್‌ ನಟ ಯಡವಟ್ಟು ಮಾಡಿದ್ದಾರೆ. ಕಾಂತಾರ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದು ಹೇಳಿ ಟೀಕೆಗೆ ಗುರಿಯಾಗಿದ್ದಾರೆ.

ಗೋವಾ ಫಿಲ್ಮೋತ್ಸವದಲ್ಲಿ ಈ ಘಟನೆ ನಡೆದಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಸಮಾರಂಭದಲ್ಲಿ ಭಾಗಿಯಾಗಿದ್ದರು. ತುಳುನಾಡಿನ ದೈವಕ್ಕೆ ರಣವೀರ್‌ ಸಿಂಗ್‌ ಅಪಮಾನ ಮಾಡಿದ್ದಾರೆಂದು ಸೋಷಿಯಲ್‌ ಮೀಡಿಯಾ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ರಿಷಬ್ ಅವರ ಕಾಂತಾರ ಸಿನಿಮಾವನ್ನು ಥಿಯೇಟರ್‌ನಲ್ಲಿ ನಾನು ನೋಡಿದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್‌ ಸಿಂಗ್‌ ಅನುಕರಣೆ ಮಾಡಿದ್ದಾರೆ. ರಣವೀರ್‌ ಮಾಡಿದ ಅಪಹಾಸ್ಯಕ್ಕೆ ದೈವಾರಾಧಕರು ಆಕ್ರೋಶ ಹೊರಹಾಕಿದ್ದಾರೆ.

ಗೋವಾದಲ್ಲಿ ನಡೆದ ಚಿತ್ರೋತ್ಸವದಲ್ಲಿ ರಣವೀರ್ ಸಿಂಗ್ ನಿರೂಪಕರಾಗಿದ್ದರು. ಕಾಂತಾರ ಸಿನಿಮಾದಲ್ಲಿ ಬರುವ ಚಾಮುಂಡಿ ದೇವರನ್ನು ‘ಹೆಣ್ಣು ದೆವ್ವ’ ಅಂತ ಕರೆದಿದ್ದಾರೆ. ರಣವೀರ್ ಸಿಂಗ್ ಅನುಕರಣೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಕನ್ನಡಾಂಬೆ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯ – ಉಮೇಶ್‌ ನಿಧನಕ್ಕೆ ಸಿಎಂ, ಗಣ್ಯರಿಂದ ಸಂತಾಪ

ಕಾರ್ಯಕ್ರಮ ನಡೆಯುವಾಗ ರಿಷಬ್ ಶೆಟ್ಟಿ ಮುಂದಿನ ಸಾಲಿನಲ್ಲೇ ಕುಳಿತಿದ್ದರು. ರಣವೀರ್‌ ಅನುಕರಣೆಗೆ ಸ್ವತಃ ರಿಷಬ್‌ ಅವರೇ ನಕ್ಕಿದ್ದಾರೆ. ಬಾಲಿವುಡ್‌ ನಟನಿಗೆ ರಿಷಬ್‌ ಯಾಕೆ ಆಕ್ಷೇಪ ವ್ಯಕ್ತಪಡಿಸಲಿಲ್ಲ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಅನೇಕರು ಪ್ರಶ್ನಿಸಿದ್ದಾರೆ.

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : “ಹೊಂಗನಸು” ವಿಶೇಷ ಕಾರ್ಯಕ್ರಮ ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ – ಸಂಧ್ಯಾ ಶೆಟ್ಟಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಜನ ಸಾಮಾನ್ಯರ ಸಂಘ-ಹರಿಣಿ ಪೂಜಾರಿ

0

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : “ಹೊಂಗನಸು” ವಿಶೇಷ ಕಾರ್ಯಕ್ರಮ

ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ – ಸಂಧ್ಯಾ ಶೆಟ್ಟಿ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಜನ ಸಾಮಾನ್ಯರ ಸಂಘ-ಹರಿಣಿ ಪೂಜಾರಿ

ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ, ನಾಯಕತ್ವ ಕೇವಲ ಒಂದು ಹುದ್ದೆಯಲ್ಲ ಅದೊಂದು ಜವಾಬ್ದಾರಿ. ಎಲ್ಲರನ್ನೂ ಸೇರಿಸಿಕೊಂಡು ಮುನ್ನಡೆಯಬಲ್ಲ ಚಾಣಾಕ್ಷನೇ ನಿಜವಾದ ನಾಯಕ ಎಂಬುದನ್ನು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನಮಗೆ ಕಲಿಸಿಕೊಟ್ಟಿದೆ ಎಂದು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಮಾಜಿ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಮನದಾಳದ ಮಾತುಗಳ ಮೂಲಕ ಹೇಳಿದರು.

ಪ್ರತಿ ಬಾರಿ ಹೊಸತನದ ಯೋಜನೆ ಹಾಗೂ ಹೊಸ ಕಾರ್ಯಕ್ರಮಗಳ ಮೂಲಕ ಸಂಘಟನೆಯನ್ನು ಬೆಳೆಸಬಲ್ಲ ವ್ಯಕ್ತಿಯೇ ನಿಜವಾದ ನಾಯಕ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಎನ್ನುವುದು ಜನ ಸಾಮಾನ್ಯರ ಸಂಘ ಇಲ್ಲಿ ಎಲ್ಲರಿಗೂ ಮುಕ್ತ ಅವಕಾಶಗಳ ತೆರೆದಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸದಸ್ಯರಾದ ಹರಿಣಿ ಪೂಜಾರಿ ಮನದಾಳದ ಮಾತುಗಳ ಮೂಲಕ ಹೇಳಿದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮAದಿರದಲ್ಲಿ ಆದಿತ್ಯವಾರ ಜರಗಿದ 26ನೇ ವರ್ಷದ ವರ್ಷಾಚರಣೆಯ ಪ್ರಯುಕ್ತ ಜರಗಿದ “ಹೊಂಗನಸು” ವಿಶೇಷ ಕಾರ್ಯಕ್ರಮದಲ್ಲಿ ಮನದಾಳದ ಮಾತು ಮೂಲಕ ಮಾತನಾಡಿದರು.

ಸಂಘದ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷ ದಿನೇಶ್ ಪೂಜಾರಿ ಬೀರೊಟ್ಟು, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್ ಮೊದಲಾದವರು ವೇದಿಕೆಯಲ್ಲಿದ್ದರು.

ಈ ಸಂದರ್ಭದಲ್ಲಿ ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್, ಪ್ರಶಾಂತ್ ಪೂಜಾರಿ, ಕೋಶಾಧಿಕಾರಿ ಪ್ರದೀಪ್ ಸುವರ್ಣ, ಸದಸ್ಯರಾದ ಲಲಿತಾ ಆಚಾರ್ಯ, ಲೀಲಾ ಪೂಜಾರಿ, ಪದ್ಮಶ್ರೀ ಪೂಜಾರಿ, ವೀಣಾ ಪೂಜಾರಿ, ಪುಷ್ಪ ಕುಲಾಲ್, ಹರೀಶ್ ಗೋಳಿಕಟ್ಟೆ, ಹರಿಣಾಕ್ಷಿ ಪೂಜಾರಿ, ಅನ್ನಪೂರ್ಣ ಕಾಮತ್, ಶಾಂತರಾಮ್ ಕುಲಾಲ್, ಯೋಗೀಶ್ ಆಚಾರ್ಯ, ಸುಭಾಸ್ ಕೆಮ್ಮಣ್ಣು, ಕಿರಣ್ ಪೂಜಾರಿ, ಶ್ರೀಕಾಂತ್ ಆಚಾರ್ಯ, ಅಭಿಷೇಕ್ ಕುಲಾಲ್, ಅವಿನಾಶ್ ಪೂಜಾರಿ, ಯಶವಂತ್ ಕುಲಾಲ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತಿತರಿದ್ದರು.