Thursday, May 14, 2026
Google search engine
Homeಕಾರ್ಕಳಮೇ 16 ರಂದು ಬಂಟರ ಸಂಘ ಪಳ್ಳಿ ನಿಂಜೂರು ವಲಯದ ವತಿಯಿಂದ ಹೊನಲು ಬೆಳಕಿನ ಬಂಟರ...

ಮೇ 16 ರಂದು ಬಂಟರ ಸಂಘ ಪಳ್ಳಿ ನಿಂಜೂರು ವಲಯದ ವತಿಯಿಂದ ಹೊನಲು ಬೆಳಕಿನ ಬಂಟರ ಕ್ರೀಡೋತ್ಸವ 2026

ಬಂಟರ ಸಂಘ ಪಳ್ಳಿ ನಿಂಜೂರು ವಲಯ ಹಾಗೂ ಕಾರ್ಕಳ, ಹೆಬ್ರಿ, ಕಾಪು ಬಂಟರ ಸಂಘದ ಸಹಯೋಗದೊಂದಿಗೆ ಕಾರ್ಕಳ, ಹೆಬ್ರಿ, ಕಾಪು ತಾಲೂಕಿನ ಬಂಟ ಬಾಂಧವರ ಹೊನಲು ಬೆಳಕಿನ ಬಂಟರ ಕ್ರೀಡೋತ್ಸವವು ಮೇ 16 ರಂದು ಸಂಜೆ 5 ಗಂಟೆಗೆ ಪಳ್ಳಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ಪಳ್ಳಿ-ನಿಂಜೂರು ವಲಯದ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಪಳ್ಳಿ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಉದ್ಘಾಟಕರಾಗಿ ವಿಧಾನಪರಿಷತ್ ಶಾಸಕ ಮಂಜುನಾಥ ಭಂಡಾರಿ ಪಾಲ್ಗೊಳ್ಳಲಿದ್ದಾರೆ.

ಮೂರು ತಾಲೂಕುಗಳು ಒಟ್ಟಾಗಿ ನಡೆಸುವ ಈ ಕಾರ್ಯಕ್ರಮಕ್ಕೆ ಬಂಟ ಬಾಂಧವರು ಜೊತೆಗೂಡಿ ಕ್ರೀಡೋತ್ಸವ ಯಶಸ್ವಿಗೊಳಿಸುವಂತೆ ಸಮಿತಿಯ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments