ರಾಜ್ಯ ಅತ್ಯುತ್ತಮ ಯುವಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿಗೆ ಕಾರ್ಕಳದ ತಹಶೀಲ್ದಾರರಾದ ಪ್ರದೀಪ್ ಆರ್. ಅವರು ಸಂಸ್ಥೆಗೆ ಭೇಟಿ ನೀಡಿ ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ಜನಪನ ಕೆಲಸ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್’ನ ಕಾರ್ಯವೈಖರಿಯನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರುಗಳಾದ ದಿನೇಶ್ ಪೂಜಾರಿ, ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಕೋಶಾಧಿಕಾರಿ ಪ್ರದೀಪ್ ಸುವರ್ಣ ಕೆಮ್ಮಣ್ಣು, ಸದಸ್ಯರಾದ ಹರಿಪ್ರಸಾದ್ ಆಚಾರ್ಯ, ಹರೀಶ್ ಪೂಜಾರಿ, ಸುಭಾಷ್ ಕೆಮ್ಮಣ್ಣು, ರಾಜೇಂದ್ರ ಶೆಟ್ಟಿಗಾರ್, ಪ್ರಶಾಂತ ಬೋಳ ಮೊದಲಾದವರಿದ್ದರು.



































