Saturday, May 30, 2026
Google search engine
Homeಕಾರ್ಕಳಸಿದ್ದರಾಮಯ್ಯ ಅವರ ಬಗ್ಗೆ ನನಗಿದ್ದ ಗೌರವ ಮತ್ತಷ್ಟು ಹೆಚ್ಚಾಯ್ತು - ಸಂಜಯ್ ರಾವತ್

ಸಿದ್ದರಾಮಯ್ಯ ಅವರ ಬಗ್ಗೆ ನನಗಿದ್ದ ಗೌರವ ಮತ್ತಷ್ಟು ಹೆಚ್ಚಾಯ್ತು – ಸಂಜಯ್ ರಾವತ್

ಸಿದ್ದರಾಮಯ್ಯ ಅವರ ಬಗ್ಗೆ ನನಗಿದ್ದ ಗೌರವ ಮತ್ತಷ್ಟು ಹೆಚ್ಚಾಯ್ತು ಎಂದು ಮಹಾರಾಷ್ಟ್ರದ ಉದ್ಧವ್‌ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಕೊಂಡಾಡಿದ್ದಾರೆ.

ಸಿದ್ದರಾಮಯ್ಯರಂತೆ ಸುಗಮ ಅಧಿಕಾರ ಹಸ್ತಾಂತರ ಅಪರೂಪ. ರಾಜಕಾರಣಿಗಳು ಸಾಮಾನ್ಯವಾಗಿ ತಮ್ಮ ಅಧಿಕಾರ ಮತ್ತು ಸ್ಥಾನಗಳನ್ನು ಬಿಟ್ಟು ಕೊಡಲು ಹಿಂಜರಿಯುತ್ತಾರೆ. ಆದರೆ, ಸಿದ್ದರಾಮಯ್ಯ ನಡೆಸಿದ ಈ “ಸುಗಮ ಅಧಿಕಾರ ಹಸ್ತಾಂತರ” ಅತ್ಯಂತ ಅಪರೂಪವಾಗಿ ಕಂಡುಬರುತ್ತದೆ. ಯಾವುದೇ ಹಠ ಹಿಡಿಯದೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮೂಲಕ ರಾಜಕಾರಣದಲ್ಲಿ ಅಪರೂಪದ ಮಾದರಿಯನ್ನು ಹಾಕಿಕೊಟ್ಟಿದ್ದಾರೆ.

“ರಾಜಕೀಯದಲ್ಲಿ ಅಧಿಕಾರ ತ್ಯಜಿಸುವುದು ಸಾಮಾನ್ಯ ವಿಷಯವಲ್ಲ. ಸಾಮಾನ್ಯವಾಗಿ ಯಾರೂ ಸ್ವಯಂಪ್ರೇರಿತವಾಗಿ ತಮ್ಮ ಸ್ಥಾನ ಬಿಟ್ಟುಕೊಡುವುದಿಲ್ಲ. ಆದರೆ, ಇದು ದೇಶದ ರಾಜಕೀಯದಲ್ಲಿ ಅಪರೂಪದ ಬೆಳವಣಿಗೆ. ಪಕ್ಷದ ತೀರ್ಮಾನಕ್ಕೆ ಬದ್ಧತೆ ತೋರಿರುವುದು ರಾಜಕೀಯ ಪ್ರೌಢತೆಯ ಸಂಕೇತ. ಅವರ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಗಿದೆ“ ಎಂದು ಸಂಜಯ್ ರಾವತ್ ಮುಕ್ತವಾಗಿ ಶ್ಲಾಘಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments