ವಿಪರೀತ ಮದ್ಯಪಾನದ ಚಟ ಹೊಂದಿದ್ದ ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿ ನಡೆದಿದೆ.
ರಮೇಶ್ ಸಪಳಿಗ ಮೃತರು. ಇವರು ಜೂ.16 ರಂದು ಮನೆಯ ಸ್ನಾನಗೃಹದ ಮೇಲ್ಚಾವಣಿಗೆ ನೇಣು ಬಿಗಿದು ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದ್ದಾರೆ.
ಘಟನೆ ಬಗ್ಗೆ ಮೃತರ ಪುತ್ರ ಭರತ್ ಸಪಳಿಗ ನೀಡಿದ ದೂರಿನ ಅನ್ವಯ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



















