Saturday, June 20, 2026
Google search engine
Homeಕಾರ್ಕಳನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ 19 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಅನುಕೀರ್ತನಾ (19) ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ಈಗಾಗಲೇ ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದಳು. ಮತ್ತೊಮ್ಮೆ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿದ್ದಳು. ಇತ್ತೀಚಿನ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಮಾನಸಿಕವಾಗಿ ತೀವ್ರ ಕುಗ್ಗಿದ್ದಳು. ಸ್ಥಳದಲ್ಲಿ ಯಾವುದೇ ಡೆತ್‌ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯ ಸಾವಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆಗೆ ಕಾರಣವಾಗಿದೆ. ನೀಟ್ ರದ್ದುಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ತಮಿಳುನಾಡಿಗೆ ನೀಟ್ ವಿನಾಯಿತಿ ನೀಡಬೇಕು ಎಂದು ಡಿಎಂಕೆ ಪುನರುಚ್ಚರಿಸಿದೆ. ಅಲ್ಲದೇ ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಘೋಷಿಸಿದೆ.

ನೀಟ್ ಪರಿಚಯಿಸಿದಾಗಿನಿಂದ ತಮಿಳುನಾಡು ನಿರಂತರವಾಗಿ ವಿರೋಧಿಸುತ್ತಾ ಬಂದಿದೆ. ದುಬಾರಿ ಖಾಸಗಿ ತರಬೇತಿಯನ್ನು ಪಡೆಯಲು ಶ್ರೀಮಂತ ವಿದ್ಯಾರ್ಥಿಗಳಿಗೆ ಮಾತ್ರ ಸಾಧ್ಯವಾಗುತ್ತದೆ. ಆದರೆ ಬಡ ವಿದ್ಯಾರ್ಥಿಗಳಿಗೆ ಈ ಪರೀಕ್ಷೆಯಿಂದ ಅನ್ಯಾಯವಾಗುತ್ತಿದೆ. ಹನ್ನೆರಡನೇ ತರಗತಿಯ ಪರೀಕ್ಷೆಗಳಲ್ಲಿ ಉತ್ತಮ ಸಾಧನೆಯ ಹೊರತಾಗಿಯೂ, ಬಡ ಮತ್ತು ಗ್ರಾಮೀಣ ಕುಟುಂಬಗಳ ವಿದ್ಯಾರ್ಥಿಗಳಿಗೆ ನೀಟ್‌ ಪರೀಕ್ಷೆಯಿಂದ ಅನಾನುಕೂಲ ಆಗುತ್ತಿದೆ ಎಂದು ಡಿಎಂಕೆ ವಾದಿಸಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments