Friday, June 19, 2026
Google search engine
Homeಕಾರ್ಕಳನೀಟ್ ಅಕ್ರಮಕ್ಕೆ ವಿದ್ಯಾರ್ಥಿಗಳ ಸಾವು: ಪ್ರಧಾನಿ ಮೋದಿಗೆ ಅಭಿಜೀತ್​ ದೀಪ್ಕೆ ಪತ್ರ; 1 ಕೋಟಿ ಪರಿಹಾರಕ್ಕೆ...

ನೀಟ್ ಅಕ್ರಮಕ್ಕೆ ವಿದ್ಯಾರ್ಥಿಗಳ ಸಾವು: ಪ್ರಧಾನಿ ಮೋದಿಗೆ ಅಭಿಜೀತ್​ ದೀಪ್ಕೆ ಪತ್ರ; 1 ಕೋಟಿ ಪರಿಹಾರಕ್ಕೆ ​ಆಗ್ರಹ

ನೀಟ್​ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಕಾಕ್ರೋಚ್​ ಜನತಾ ಪಾರ್ಟಿ ಕೆಲ ದಿನಗಳ ಹಿಂದೆ ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸಿತ್ತು.ಈಗ ನೀಟ್​ ಪರೀಕ್ಷೆ ಅಕ್ರಮದಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಕ್ಕೆ ಕೇಂದ್ರ ಸರ್ಕಾರ 1 ಕೋಟಿ ರೂಪಾಯಿಗಳನ್ನು ಪರಿಹಾರ ಮೊತ್ತವಾಗಿ ನೀಡಬೇಕೆಂದು ಸಿಜೆಪಿ ಸ್ಥಾಪಕ ಅಭಿಜೀತ್​ ದೀಪ್ಕೆ ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವ ಬಹಿರಂಗ ಪತ್ರದಲ್ಲಿ ದೀಪ್ಕೆ, ಕಳೆದ 48 ಗಂಟೆಗಳಲ್ಲಿ ಇಲ್ಲಿವರೆಗೆ ಸುಮಾರು 11 ಜನ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಆಗದೇ ಹೋಗಿದ್ದರೆ, ಈ ಮಕ್ಕಳು ಜೀವ ಕಳೆದುಕೊಳ್ಳುತ್ತಿರಲಿಲ್ಲ. ಈಗ ಇದರ ಹೊಣೆಯನ್ನು ಕೇಂದ್ರ ಸರ್ಕಾರ ಹೊತ್ತುಕೊಂಡು ಮೃತರ ಕುಟುಂಬಗಳಿಗೆ ತಲಾ 1 ಕೋಟಿ ಆರ್ಥಿಕ ಸಹಾಯ ಮಾಡಬೇಕೆಂದು ದೀಪ್ಕೆ ಒತ್ತಾಯಿಸಿದ್ದಾರೆ.

ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಿರಲೆಂದು, ಪಾಲಕರು ಲಕ್ಷಾಂತರ ರೂಪಾಯಿಗಳನ್ನು ಹೂಡಿಕೆ ಮಾಡಿದ್ದರು. ಆದರೆ ಪರೀಕ್ಷಾ ಅಕ್ರಮದಿಂದ ಅವರ ಹಣ ಮತ್ತು ಮಕ್ಕಳ ಜೀವ ಎರಡನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಅವರು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments