ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ವಿಜೇತ ಸಂಸ್ಥೆ ಅಬ್ಬನಡ್ಕ – ನಂದಳಿಕೆ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಯೋಗದೊಂದಿಗೆ ಯುವ ಕೃಷಿಕರಾದ ರಾಜೇಶ್ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ನಂದಳಿಕೆಯ ಕೊಡುಂದೂರಿನ ಬೆರಣಗುಡ್ಡೆಯ ಗದ್ದೆಯಲ್ಲಿ ಜುಲೈ 12ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 11 ರಿಂದ ಸಂಘದ ಸದಸ್ಯರಿಂದ ಗದ್ದೆ ನಾಟಿ “ನಮ್ಮ ನಡೆ ಕೃಷಿಯ ಕಡೆ” ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಸುರೇಶ್ ಪೂಜಾರಿ ಅಬ್ಬನಡ್ಕ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.



















