Tuesday, July 14, 2026
Google search engine
Homeಕಾರ್ಕಳಮೌಲ್ಯಸುಧಾ: ಸುವರ್ಣ ಮಾಲಿಕೆ ಸಂಭ್ರಮ; ಸನಾತನ ರಾಷ್ಟ್ರಾಂಜಲಿ ಪ್ರಸ್ತುತಿ

ಮೌಲ್ಯಸುಧಾ: ಸುವರ್ಣ ಮಾಲಿಕೆ ಸಂಭ್ರಮ; ಸನಾತನ ರಾಷ್ಟ್ರಾಂಜಲಿ ಪ್ರಸ್ತುತಿ

ಶಿಕ್ಷಣದ ಜೊತೆಗೆ ಉತ್ತಮ ಜೀವನ ಮೌಲ್ಯವನ್ನು ನೀಡುವ ಮೌಲ್ಯಸುಧಾ ಸರಣಿ ಮಾಲಿಕೆ ಸುವರ್ಣ ಸಂಚಿಕೆಯ ಮೂಲಕ ದಾಪುಗಾಲಿಟ್ಟಿರುವುದು ಜ್ಞಾನಸುಧಾದ ಬದ್ಧತೆಗೆ ಸಾಕ್ಷಿಯಾಗಿದೆ. ಇಲ್ಲಿ ಸಿಗುವ ಎಲ್ಲಾ ಜ್ಞಾನವನ್ನು ಸಂಪಾದಿಸಿಕೊಂಡು ಉತ್ತಮ ನಾಗರಿಕರಾಗಿ ಮನೆಗೆ, ಕುಟುಂಬಕ್ಕೆ, ಊರಿಗೆ, ನಾಡಿಗೆ ಹಾಗೂ ದೇಶಕ್ಕೆ ಒಳ್ಳೆಯ ಆಸ್ತಿಯಾಗಿ ಮೂಡಿಬನ್ನಿ ಎಂದು ಸಾಣೂರಿನ ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಸರಣಿ ಮಾಲಿಕೆಯ ಸುವರ್ಣ ಸಂಚಿಕೆಯ 50ನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಇದೇ ಸಂದರ್ಭ ವಿದ್ವಾಂಸ ಮುನಿರಾಜ್ ರೆಂಜಾಳ, ನಿವೃತ್ತ ಪ್ರಾಂಶುಪಾಲರಾದ ಬೇಬಿಈಶ್ವರ ಮಂಗಲ, ನಿವೃತ್ತ ಶಿಕ್ಷಕ ಜಗದೀಶ್, ಉದ್ಯಮಿ ದೇವೇಂದ್ರ ನಾಯಕ್, ಪತ್ರಕರ್ತರಾದ ಶ್ರೀ ರಾಮಚಂದ್ರ ಬರೆಪ್ಪಾಡಿ, ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿಗಳಾದ ಶ್ರೀಮತಿ ವಿದ್ಯಾವತಿ ಎಸ್ ಶೆಟ್ಟಿ, ಶ್ರೀ ಅನಿಲ್ ಕುಮಾರ್ ಜೈನ್, ಸಿ.ಇ.ಒ ಹಾಗೂ ಪ್ರಾಂಶುಪಾಲರು ಶ್ರೀ ದಿನೇಶ್ ಎಂ ಕೊಡವೂರು, ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ, ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲ ಶ್ರೀ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ ರವಿ ಜಿ, ಅಜೆಕಾರು ಜ್ಞಾನಸುಧಾದ ಪ್ರಾಂಶುಪಾಲ ಶ್ರೀ ಸಂತೋಷ್, ಪ್ರೌಢಶಲೆಯ ಉಪಪ್ರಾಂಶುಪಾಲರಾದ ಶ್ರೀಮತಿ ಆರತಿ ಉಪಸ್ಥಿತರಿದ್ದರು.ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಆಂಗ್ಲಭಾಷ ಉಪನ್ಯಾಸಕಿ ಶ್ರೀಮತಿ ಶಮಿತಾ ನಿರೂಪಿಸಿ ವಂದಿಸಿದರು.

ಸನಾತನ ನಾಟ್ಯಾಲಯದಿಂದ ಸನಾತನ ರಾಷ್ಟ್ರಾಂಜಲಿ: ಮೌಲ್ಯಸುಧಾದ ಸುವರ್ಣ ಮಾಲಿಕೆಯಲ್ಲಿ ರಾಜ್ಯದಲ್ಲಿ ವಿಭಿನ್ನ ನೃತ್ಯ ಸಂಸ್ಥೆಯಾಗಿ ಗುರುತಿಸಿಕೊಂಡು ಹಾಗೂ ಪ್ರತಿಷ್ಠಿತ ವೇದಿಕೆಗಳಲ್ಲಿ ನೃತ್ಯ ಸೇವೆಯನ್ನು ನೀಡುತ್ತಾ ಬಂದಿರುವ ಹೆಮ್ಮಯ ನೃತ್ಯ ಸಂಸ್ಥೆಯಾಗಿರುವ ಸನಾತನ ನಾಟ್ಯಾಲಯ ಮಂಗಳೂರು ಇವರಿಂದ ಸುಂದರ ಕಾರ್ಯಕ್ರಮ ಮೂಡಿ ಬಂತು. ನಾಟ್ಯಾಲಯದ ನೃತ್ಯಗುರುಗಳಾದ ವಿದುಷಿ ಶ್ರೀಲತಾ ನಾಗರಾಜ್ ರವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ಲತೇಶ್ ಬಾಕ್ರಬೈಲು ನಿರೂಪಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments