ಅಯೋಧ್ಯೆ ರಾಮಮಂದಿರದಲ್ಲಿ ನಡೆ ದಂತೆ ಬದರೀನಾಥ ದೇಗುಲದಲ್ಲೂ ದೇಣಿಗೆ ಕಳವು ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ನಡುವೆ ಅದನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ದೇಗುಲದ ಮಾಜಿ ಅಧಿಕಾರಿ ರಾಜೇಂದ್ರ ಚೌಹಾಣ್ ಅವರನ್ನು ಶುಕ್ರವಾರ ಬಂಧಿಸಿದೆ.
ಶಂಕಿತರಲ್ಲಿ ಚೌಹಾಣ್ ಕೂಡ ಒಬ್ಬರಾ ಗಿದ್ದು, ತನಿಖೆಯ ವೇಳೆ ಸಂಗ್ರಹಿಸಲಾದ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಅವರನ್ನು 4 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿದೆ. ಜೂ.22, 25 ಹಾಗೂ 29 ರಂದು ಚೌಹಾಣ್ ನಗದು ಕಂತೆಗಳನ್ನು ಸಂಗ್ರಹಿಸಿ ತನ್ನ ಜೇಬಿನಲ್ಲಿ ಹಾಕಿಕೊಳ್ಳುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


















