ಹೆಬ್ರಿ : ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಜಿಲ್ಲಾ ಚೇರ್ಮನ್ ಡಾ. ಅಶೋಕ ಕುಮಾರ್ ವೈಜಿ., ಜಿಲ್ಲಾ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರ್ ನೇತ್ರತ್ವದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನೂತನವಾಗಿ ಆರಂಭವಾಗಲಿರುವ ಹೆಬ್ರಿ ತಾಲ್ಲೂಕು ರೆಡ್ ಕ್ರಾಸ್ ಸೊಸೈಟಿಯ ಚೇರ್ಮನ್ ಆಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವರಂಗ ವೀಣಾ ಆರ್ ಭಟ್ ಸರ್ವಾನುಮತದಿಂದ ಆಯ್ಕೆಯಾದರು.
ವೈಸ್ ಚೇರ್ಮನ್ ಆಗಿ ಹೆಬ್ರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೈ, ಕೋಶಾಧಿಕಾರಿಯಾಗಿ ಹೆಬ್ರಿ ಕಲ್ಲಿಲ್ಲು ಪ್ರಕಾಶ ಶೆಟ್ಟಿ ಆಯ್ಕೆಯಾದರು.


















