ಹಳೆ ವಿದ್ಯಾರ್ಥಿಸಂಘ ವಂಜಾರಕಟ್ಟೆ ಅನುದಾನಿತ ಹಿರಿಯ ಪ್ರಾಥಾಮಿಕ ಶಾಲೆ ಬೋಳ, ಹಿತೈಷಿ ಬಳಗ ವಂಜಾರಕಟ್ಟೆ ಆಂಗ್ಲ ಮಾಧ್ಯಮ ಶಾಲೆ ಬೋಳ, ಯಕ್ಷಾಕ್ಷರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಬೋಳ ಹಾಗೂ ಪ್ರಗತಿಪರ ಕೃಷಿಕ ರೋನಾಲ್ಡ್ ಆಲೋನ್ಸ್ ಅವರ ನೇತೃತ್ವದಲ್ಲಿ ಪರಿಸರ ಜಾಗೃತಿ, ಹಣ್ಣಿನಗಿಡ ನೆಡುವ, ವಿತರಣೆ, ಕ್ರೀಡಾ ಸಾಮಗ್ರಿಗಳ ವಿತರಣೆ, ವಿಶೇಷ ಕೃಷಿ ಸಾಧಕರಿಗೆ ಸಮ್ಮಾನ ಸಮಾರಂಭವು ಜು. 25ರಂದು ಬೋಳ ವಂಜಾರಕಟ್ಟೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯ ಲಿದೆ.
ಮೂಡಬಿದ್ರೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ ಅವರು ವಿಶೇಷ ಉಪನ್ಯಾಸ ನೀಡಲಿ ದ್ದಾರೆ ಎಂದು ವಂಜಾರಕಟ್ಟೆ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಶೆಟ್ಟಿ ಗುಂಡುಕಲ್ಲು ಹಾಗೂ ಕಾರ್ಯಕ್ರಮ ನಿರ್ದೇಶಕ ಬೋಳ ಸುಧಾಕರ ಆಚಾರ್ಯ ತಿಳಿಸಿದ್ದಾರೆ.


















