ಕಾರ್ಕಳದ ಬಂಡಿಮಠ ನಿವಾಸಿ ನಿವೃತ್ತ ಕಂದಾಯ ನಿರೀಕ್ಷಕ ಶಿವರಾಮ್ ( 68) ಅವರು ಅನಾರೋಗ್ಯದಿಂದ ಸೋಮವಾರ ಬೆಂಗಳೂರಿನಲ್ಲಿ ನಿಧನರಾದರು.
ಗ್ರಾಮ ಲೆಕ್ಕಾಧಿಕಾರಿಯಾಗಿ ಕಂದಾಯ ಇಲಾಖೆಗೆ ಸೇರಿದ ಶಿವರಾಮ್ ಉಡುಪಿ ಜಿಲ್ಲೆಯ ಹಲವೆಡೆ ಸೇವೆ ಸಲ್ಲಿಸಿ ಬಳಿಕ ಕಂದಾಯ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದರು. ಸೇವೆಯಲ್ಲಿ ಜನಮನ್ನಣೆಗಳಿಸಿದ್ದರು.
ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.
ಅಂತಿಮ ದರ್ಶನ : ಶಿವರಾಮ್ ಅವರ ಪಾರ್ಥಿವ ಶರೀರವನ್ನು ಕಾರ್ಕಳದ ನಿವಾಸಕ್ಕೆ ಮಂಗಳವಾರ ಮುಂಜಾನೆ ತರಲಾಗುತ್ತದೆ.ಬೆಳಿಗ್ಗೆ 9 ಗಂಟೆಯಿಂದ ಅಂತಿಮ ದರ್ಶನ ಪಡೆಯಬಹುದು ಎಂದು ಅವರ ಆಪ್ತ ವಲಯದ ಮೂಲಗಳು ತಿಳಿಸಿವೆ.


















