ಸಮಾಜದಲ್ಲಿನ ಅಜ್ಞಾನ ಅಂಧಕಾರವನ್ನು ಹೋಗಲಾಡಿಸಲು ಆದ್ಯಾತ್ಮದ ಮೂಲಕ ಶ್ರಮಿಸಿ, ಶಿಕ್ಷಣದ ಮಹತ್ವವನ್ನು ಸಾರಿದ ಸಮಾನತೆಯ ಹರಿಕಾರ ಶೋಷಿತರ ಪಾಲಿಗೆ ಬೆಳಕಾಗಿರುವ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಗಸ್ಟ್ 28 ಶುಕ್ರವಾರ ಬೆಳಿಗ್ಗೆ 10:30 ಗಂಟೆಗೆ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜನೆ ಮಾಡಲಾಗಿದೆ.
ಈ ಸಭೆಯಲ್ಲಿ ಸಮಾಜದಲ್ಲಿ ವಿಶೇಷ ಸಾಧನೆ ಮಾಡಿದ 11 ಜನ ಹಿಂದುಳಿದ ವರ್ಗದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


















