Friday, August 28, 2026
Google search engine
Homeರಾಜ್ಯ180 ಕೋಟಿ ಹೈಕಮಾಂಡ್‌ಗೆ ಹೋಗಿರೋದು ಬಾಯಿಬಿಟ್ರೆ ಕಷ್ಟ ಅಂತ ನಾಗೇಂದ್ರನನ್ನ ಕ್ಯಾಬಿನೆಟ್‌ಗೆ ತಗೊಂಡ್ರಾ? – ಆರ್....

180 ಕೋಟಿ ಹೈಕಮಾಂಡ್‌ಗೆ ಹೋಗಿರೋದು ಬಾಯಿಬಿಟ್ರೆ ಕಷ್ಟ ಅಂತ ನಾಗೇಂದ್ರನನ್ನ ಕ್ಯಾಬಿನೆಟ್‌ಗೆ ತಗೊಂಡ್ರಾ? – ಆರ್. ಅಶೋಕ್ ಪ್ರಶ್ನೆ

80 ಕೋಟಿ ರೂ. ಕಾಂಗ್ರೆಸ್ ಹೈಕಮಾಂಡ್‌ಗೆ ಹೋಗಿದೆ ಎಂದು ನಾಗೇಂದ್ರ ಬಾಯಿಬಿಟ್ಟರೆ ಕಷ್ಟ ಆಗುತ್ತೆ ಅಂತ ಅವರನ್ನ ಮತ್ತೆ ಕ್ಯಾಬಿನೆಟ್‌ಗೆ ತಗೊಂಡ್ರಾ? ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮುಖ್ಯಮಂತ್ರಿಗಳನ್ನ ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್. ಅಶೋಕ್, ನಾಗೇಂದ್ರ ರಾಜೀನಾಮೆ ನೀಡಲೇಬೇಕು. ಈ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಸಲಿದೆ. ನಾಗೇಂದ್ರ ಏನು ಅಣ್ಣಾ ಹಜಾರೆನಾ? ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ತೆಗೆದುಹಾಕಲಾಗಿದ್ದ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿದ್ದು ಏಕೆ? ದಲಿತರ ಹಣವನ್ನು ಒಬ್ಬ ದಲಿತನೇ ನುಂಗಿದ್ದು ಸರೀನಾ? ಹಗರಣವೇ ನಡೆದಿಲ್ಲ ಎಂದಾದರೆ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಏಕೆ ಬಂತು ಎಂದು ಪ್ರಶ್ನಿಸಿದ್ದಾರೆ.

ನಾಗೇಂದ್ರ ರಾಜೀನಾಮೆ ನೀಡದಿದ್ದರೆ ಮುಂದಿನ ಅಧಿವೇಶನದಲ್ಲೂ ಪ್ರತಿಭಟನೆ ನಡೆಸುತ್ತೇವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಗೂ ಮುತ್ತಿಗೆ ಹಾಕುತ್ತೇವೆ ಎಂದು ಅಶೋಕ್‌ ಎಚ್ಚರಿಸಿದ್ದಾರೆ.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments