Wednesday, September 2, 2026
Google search engine
Homeಕಾರ್ಕಳನಿಟ್ಟೆ ತಾಂತ್ರಿಕ ಕಾಲೇಜಿನ ಎನ್ಎಸ್ಎಸ್ ಘಟಕ ಉದ್ಘಾಟನೆ

ನಿಟ್ಟೆ ತಾಂತ್ರಿಕ ಕಾಲೇಜಿನ ಎನ್ಎಸ್ಎಸ್ ಘಟಕ ಉದ್ಘಾಟನೆ

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2026-27ನೇ ಶೈಕ್ಷಣಿಕ ಸಾಲಿನ ಎನ್ಎಸ್ಎಸ್ ಘಟಕದ ಚಟುವಟಿಕೆಗಳನ್ನು ಆಗಸ್ಟ್ ೨೯ ರಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತರರಾಷ್ಟ್ರೀಯ ಸಹಯೋಗದ ನಿರ್ದೇಶಕ ಪ್ರೊ. ಹರಿಕೃಷ್ಣ ಭಟ್ ಅವರು ಆಹ್ವಾನಿತ ಗಣ್ಯರು ಹಾಗೂ ಸುಮಾರು 250 ಎನ್ಎಸ್ಎಸ್ ಸ್ವಯಂಸೇವಕರ ಸಮ್ಮುಖದಲ್ಲಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ವಹಿಸಿದ್ದರು.
ದೀಪ ಬೆಳಗಿಸುವ ಮೂಲಕ ಘಟಕವನ್ನು ಔಪಚಾರಿಕವಾಗಿ ಉದ್ಘಾಟಿಸಲಾಯಿತು.
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರೊ. ಹರಿಕೃಷ್ಣ ಭಟ್ ಅವರು ಸುರತ್ಕಲ್ ನ ಅಂದಿನ ಕೆ.ಆರ್.ಇ.ಸಿ ಯ ಎನ್ಎಸ್ಎಸ್ ಸ್ವಯಂಸೇವಕರಾಗಿದ್ದ ತಮ್ಮ 55 ವರ್ಷಗಳ ಹಳೆಯ ನೆನಪುಗಳನ್ನು ಮೆಲುಕುಹಾಕಿಕೊಂಡರು. ಶಿಕ್ಷಣದ ಜೊತೆಗೆ ಸಮಾಜಕ್ಕೆ ಸೇವಾ ಮನೋಭಾವವನ್ನು ಬೆಳೆಸುವ ಮಹತ್ವವನ್ನು ಅವರು ತಿಳಿಸಿದರು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಯು ಒಂದಲ್ಲ ಒಂದು ರೂಪದಲ್ಲಿ ಸೇವೆಯ ಮೂಲಕ ಸಮಾಜಕ್ಕೆ ಕೊಡುಗೆ ನೀಡುವಂತೆ ಪ್ರೋತ್ಸಾಹಿಸಿದರು.
ಡಾ. ನಿರಂಜನ್ ಎನ್. ಚಿಪ್ಲುಂಕರ್ ಅವರು ಎನ್ಎಸ್ಎಸ್ ಘಟಕಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು ಮತ್ತು ಇತ್ತೀಚಿನ ವರ್ಷಗಳಲ್ಲಿ ಎನ್ಎಸ್ಎಸ್ ಕೈಗೊಂಡ ವಿವಿಧ ಚಟುವಟಿಕೆಗಳನ್ನು ಶ್ಲಾಘಿಸಿದರು. ಸಮುದಾಯ ಸೇವೆ ಮತ್ತು ಸಾಮಾಜಿಕ ಜವಾಬ್ದಾರಿಯ ಕಡೆಗೆ ತಮ್ಮ ಪ್ರಯತ್ನಗಳನ್ನು ಮುಂದುವರಿಸಲು ಅವರು ಸ್ವಯಂಸೇವಕರನ್ನು ಪ್ರೋತ್ಸಾಹಿಸಿದರು.
ಘಟಕದ ಪ್ರಮುಖ ಸದಸ್ಯರಿಗೆ ಎನ್ಎಸ್ಎಸ್ ಗುರುತಿನ ಚೀಟಿಗಳನ್ನು ಗಣ್ಯರು ಇದೇ ಸಂದರ್ಭದಲ್ಲಿ ವಿತರಿಸಿದರು. ವೇದಿಕೆಯಲ್ಲಿ ಉಪಪ್ರಾಂಶುಪಾಲ ಡಾ. ನಾಗೇಶ್ ಪ್ರಭು ಉಪಸ್ಥಿತರಿದ್ದರು.
ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಧನಂಜಯ ಬಿ. ಸ್ವಾಗತಿಸಿದರೆ, ಎನ್ಎಸ್ಎಸ್ ಘಟಕದ ವಿದ್ಯಾರ್ಥಿ ನಾಯಕಿ ಸ್ಪೂರ್ತಿ ಬೈಲೂರ್ ವಂದಿಸಿದರು. ಲಿಕಿತಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.
ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments