ಬೈಲೂರು:ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ತಂಡ

0

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ತಂಡ

ಬೈಲೂರು: ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಇದರ ನೇತೃತ್ವದ ಬಾಲಕರ ವಾಲಿಬಾಲ್ ತಂಡ ನವಂಬರ್ 4 ಮತ್ತು 5 ರಂದು ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದ ರಾಜ್ಯಮಟ್ಟದ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಗೆಲವು ಸಾಧಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

ತಂಡದ ಮಣಿಕಂಠರವರಿಗೆ ಬೆಸ್ಟ್ ಅಟ್ಯಾಕರ್ ಪ್ರಶಸ್ತಿ ಲಭಿಸಿದೆ. ಸಾಧಕ ತಂಡದ ಸದಸ್ಯರಿಗೆ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಸಂಸ್ಥೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ. ತಂಡದ ಯಶಸ್ಸಿನ ಹಿಂದೆ ಹಗಲಿರುಳು ದುಡಿದ, ದೈಹಿಕ ಶಿಕ್ಷಣ ನಿರ್ದೇಶಕ ಫೆಡ್ರಿಕ್ ರೇಬೆಲ್ಲೂ ಹಾಗೂ ಕಾಲೇಜಿನ ಕ್ರೀಡಾ ಸಂಚಾಲಕ-ಉಪನ್ಯಾಸಕ ರತ್ನಾಕರ ಪೂಜಾರಿ, ತರಬೇತುದಾರರಾದ ಮಹಮ್ಮದ್ ಶೇಕ್ ಅಯಾನ್, ಮಹಮ್ಮದ್ ಶೇಕ್ ಅಮನ್ ರವರಿಗೆ ಸಂಸ್ಥೆ ಅಭಿವಂದನೆ ಸಲ್ಲಿಸಿದೆ.

   

LEAVE A REPLY

Please enter your comment!
Please enter your name here