Sunday, February 1, 2026
Google search engine
Homeಕಾರ್ಕಳಕಾರ್ಕಳ:ಮಗು ಆದ ಕಾರಣಕ್ಕೆ ಕೆಲಸಕ್ಕೆ ಹೋಗಲಿಕ್ಕೆ ಆಗುವುದಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

ಕಾರ್ಕಳ:ಮಗು ಆದ ಕಾರಣಕ್ಕೆ ಕೆಲಸಕ್ಕೆ ಹೋಗಲಿಕ್ಕೆ ಆಗುವುದಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

ಕಾರ್ಕಳ:ಮಗು ಆದ ಕಾರಣಕ್ಕೆ ಕೆಲಸಕ್ಕೆ ಹೋಗಲಿಕ್ಕೆ ಆಗುವುದಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

ಶಿಕ್ಷಕಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಈದು ನಿವಾಸಿ ಪ್ರಸನ್ನಾ (29) ಆತ್ಮಹತ್ಯೆ ಮಾಡಿಕೊಂಡವರು.ಅವರು ಹೊಸ್ಮಾರ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಥಿತಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.

ಪ್ರಸನ್ನರವರು 2022ರಲ್ಲಿ ವಿವಾಹವಾಗಿದ್ದು,10 ತಿಂಗಳ ಹೆಣ್ಣು ಮಗು ಇತ್ತು.ಅವರು ತನ್ನ ತಾಯಿಗೆ ಕರೆಮಾಡಿ ನನಗೆ ಗಂಡನ ಮನೆಯವರು ಒಳ್ಳೆ ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ,ನನಗೆ ಇಷ್ಟು ಬೇಗ ಮಗು ಬೇಡವಾಗಿತ್ತು ನಾನು ಕೆಲಸಕ್ಕೆ ಹೋಗಲು ಆಗುವುದಿಲ್ಲ ಎಂದು ಹೇಳುತ್ತಿದ್ದರು. ಈ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದ ಪ್ರಸನ್ನಾ ರವರು ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ತಾನು ಕಷ್ಟಪಟ್ಟು ಓದಿದ್ದರೂ ತನಗೆ ಮಗು ಆದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದರು. ಇದೆ ಕಾರಣಕ್ಕೆ ನ.6 ರಂದು ಗಂಡನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments