ಉಡುಪಿ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ:ಕಾರ್ಕಳ ಜ್ಞಾನಸುಧಾದ ಇಬ್ಬರು ಮೈಸೂರು ವಿಭಾಗೀಯ ಮಟ್ಟಕ್ಕೆ

0

ಉಡುಪಿ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ:ಕಾರ್ಕಳ ಜ್ಞಾನಸುಧಾದ ಇಬ್ಬರು ಮೈಸೂರು ವಿಭಾಗೀಯ ಮಟ್ಟಕ್ಕೆ

ಉಡುಪಿ : ರಾಜ್ಯ ಕ್ಷೇಮಾಭಿವೃದ್ಧಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನ.21ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ಪ್ರಥಮ ಸ್ಥಾನವನ್ನು ಹಾಗೂ ಪ್ರಥಮ ವಿಜ್ಞಾನ ವಿಭಾಗದ ಜಾಹ್ನವಿ ಜೆ. ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದು ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಈ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭಹಾರೈಸಿದ್ದಾರೆ.

   

LEAVE A REPLY

Please enter your comment!
Please enter your name here