Wednesday, February 19, 2025
Google search engine
Homeಕಾರ್ಕಳಇನ್ನಾ400 ಕೆವಿ ವಿದ್ಯುತ್ ಪವರ್ ಲೈನ್ ಸಮಸ್ಯೆ ಬಗ್ಗೆ ವಿಧಾನ ಮಂಡಲದಲ್ಲಿ ಧ್ವನಿ ಎತ್ತಿದ ಮಂಜುನಾಥ...

ಇನ್ನಾ400 ಕೆವಿ ವಿದ್ಯುತ್ ಪವರ್ ಲೈನ್ ಸಮಸ್ಯೆ ಬಗ್ಗೆ ವಿಧಾನ ಮಂಡಲದಲ್ಲಿ ಧ್ವನಿ ಎತ್ತಿದ ಮಂಜುನಾಥ ಭಂಡಾರಿ:ಉದಯ ಶೆಟ್ಟಿ ಸಂತಸ

ಇನ್ನಾ 400 ಕೆ ವಿ ವಿದ್ಯುತ್ ಪವರ್ ಲೈನ್ ಸಮಸ್ಯೆ ಬಗ್ಗೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ವಿಧಾನ ಮಂಡಲದಲ್ಲಿ ಧ್ವನಿ ಎತ್ತಿದ್ದಾರೆ.

ದಿನಾಂಕ 12.12.2024ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ ಭಂಡಾರಿ ಅವರು ನಂದಿಕೂರು ಕಾಸರಗೋಡು ವಿದ್ಯುತ್ ಲೈನ್ ಕಾಮಗಾರಿಯ ಅವೈಜ್ಞಾನಿಕ ಯೋಜನೆ ಕುರಿತಂತೆ ಹಾಗೂ ಇದರಿಂದ ರೈತರಿಗೆ ಆಗುವ ಅನಾನುಕೂಲವನ್ನು ವಿವರಿಸಿದರು.

ಕೂಡಲೇ ಟವರ್ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ವೈಜ್ಞಾನಿಕವಾಗಿ ನೆಲದಡಿಯಲ್ಲಿ ವಿದ್ಯುತ್ ಲೈನ್ ನಿರ್ಮಾಣ ಮಾಡುವ ಕುರಿತಂತೆ ಶೂನ್ಯ ವೇಳೆಯಲ್ಲಿ ಇಂಧನ ಸಚಿವರನ್ನು ಒತ್ತಾಯಿಸಿದರು.

ಉದಯ ಶೆಟ್ಟಿ ಸಂತಸ:ವಿಧಾನ ಪರಿಷತ್ ನಲ್ಲಿ ಇಂದು ಮಂಜುನಾಥ ಭಂಡಾರಿಯವರು ವಿದ್ಯುತ್ ಪವರ್ ಲೈನ್ ಬಗ್ಗೆ ಮಾಡಿರುವ ಪ್ರಸ್ತಾಪ ಇನ್ನಾದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಿಕ್ಕ ಮೊದಲ ಜಯ ಎಂದು ಉದಯ ಶೆಟ್ಟಿ ಸಂತಸ ತಿಳಿಸಿದ್ದಾರೆ.

ಈ ಯೋಜನೆಯನ್ನು ವಿರೋಧಿಸಿ ಅಹೋ ರಾತ್ರಿ ಹೋರಾಟವನ್ನು ರೈತರೊಂದಿಗೆ ಸೇರಿ ಮಾಡಿದ್ದೆವು. ಈ ಹೋರಾಟಕ್ಕೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ಮತ್ತಷ್ಟು ಬಲ ನೀಡಿರುವುದು ಹೋರಾಟಗಾರರಿಗೆ ಸಿಕ್ಕ ಮೊದಲ ಜಯ ಎಂದು ಹೇಳಿದ್ದಾರೆ.

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ನಾ400 ಕೆವಿ ವಿದ್ಯುತ್ ಪವರ್ ಲೈನ್ ಸಮಸ್ಯೆ ಬಗ್ಗೆ ವಿಧಾನ ಮಂಡಲದಲ್ಲಿ ಧ್ವನಿ ಎತ್ತಿದ ಮಂಜುನಾಥ ಭಂಡಾರಿ:ಉದಯ ಶೆಟ್ಟಿ ಸಂತಸ

ಇನ್ನಾ 400 ಕೆ ವಿ ವಿದ್ಯುತ್ ಪವರ್ ಲೈನ್ ಸಮಸ್ಯೆ ಬಗ್ಗೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ವಿಧಾನ ಮಂಡಲದಲ್ಲಿ ಧ್ವನಿ ಎತ್ತಿದ್ದಾರೆ.

ದಿನಾಂಕ 12.12.2024ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ ಭಂಡಾರಿ ಅವರು ನಂದಿಕೂರು ಕಾಸರಗೋಡು ವಿದ್ಯುತ್ ಲೈನ್ ಕಾಮಗಾರಿಯ ಅವೈಜ್ಞಾನಿಕ ಯೋಜನೆ ಕುರಿತಂತೆ ಹಾಗೂ ಇದರಿಂದ ರೈತರಿಗೆ ಆಗುವ ಅನಾನುಕೂಲವನ್ನು ವಿವರಿಸಿದರು.

ಕೂಡಲೇ ಟವರ್ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ವೈಜ್ಞಾನಿಕವಾಗಿ ನೆಲದಡಿಯಲ್ಲಿ ವಿದ್ಯುತ್ ಲೈನ್ ನಿರ್ಮಾಣ ಮಾಡುವ ಕುರಿತಂತೆ ಶೂನ್ಯ ವೇಳೆಯಲ್ಲಿ ಇಂಧನ ಸಚಿವರನ್ನು ಒತ್ತಾಯಿಸಿದರು.

ಉದಯ ಶೆಟ್ಟಿ ಸಂತಸ:ವಿಧಾನ ಪರಿಷತ್ ನಲ್ಲಿ ಇಂದು ಮಂಜುನಾಥ ಭಂಡಾರಿಯವರು ವಿದ್ಯುತ್ ಪವರ್ ಲೈನ್ ಬಗ್ಗೆ ಮಾಡಿರುವ ಪ್ರಸ್ತಾಪ ಇನ್ನಾದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಿಕ್ಕ ಮೊದಲ ಜಯ ಎಂದು ಉದಯ ಶೆಟ್ಟಿ ಸಂತಸ ತಿಳಿಸಿದ್ದಾರೆ.

ಈ ಯೋಜನೆಯನ್ನು ವಿರೋಧಿಸಿ ಅಹೋ ರಾತ್ರಿ ಹೋರಾಟವನ್ನು ರೈತರೊಂದಿಗೆ ಸೇರಿ ಮಾಡಿದ್ದೆವು. ಈ ಹೋರಾಟಕ್ಕೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ಮತ್ತಷ್ಟು ಬಲ ನೀಡಿರುವುದು ಹೋರಾಟಗಾರರಿಗೆ ಸಿಕ್ಕ ಮೊದಲ ಜಯ ಎಂದು ಹೇಳಿದ್ದಾರೆ.

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments