ರೇಷನ್ ಕಾರ್ಡು ತಿದ್ದುಪಡಿ ಅಂತಿಮ ಗಡು ಇನ್ನೊಂದು ತಿಂಗಳು ವಿಸ್ತರಣೆ ಮಾಡಲು ಮನವಿ
ರೇಷನ್ ಕಾರ್ಡು ತಿದ್ದುಪಡಿ ಅಂತಿಮ ಗಡುವನ್ನು ರಾಜ್ಯ ಸರಕಾರ ಹಾಗು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇನ್ನೊಂದು ತಿಂಗಳು ವಿಸ್ತರಣೆ ಮಾಡಿದಲ್ಲಿ ಜನರಿಗೆ ತುಂಬಾ ಅನುಕೂಲವಾಗಲಿದೆ.
ಇನ್ನು ಬಾಕಿ ಉಳಿದ ಆನೇಕ ಕಾರ್ಡ್ ಗಳ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಈ ಮೊದಲು ರೇಷನ್ ಕಾರ್ಡು ತಿದ್ದುಪಡಿಗೆ ಡಿಸೆಂಬರ್ 31 ಅಂತಿಮ ಗಡುವನ್ನು ನೀಡಿತ್ತು. ಆದರೆ ಸಾರ್ವಜನಿಕರ ಹಿತ ದೃಷ್ಟಿಯಿಂದ ತಿದ್ದುಪಡಿ ಸಾಕಷ್ಟು ಬಾಕಿ ಉಳಿದ ಹಿನ್ನಲೆಯಲ್ಲಿ ಜನವರಿ 31 ರ ತನಕ ತಿದ್ದುಪಡಿ ದಿನಾಂಕ ಮುಂದುವರೆಸಿದ್ದಾರೆ.
ಪಡಿತರ ಚೀಟಿಯಲ್ಲಿ ಮನೆ ಯಜಮಾನರ ಹೆಸರು ಬದಲಾವಣೆ, ಹೆಸರು ಸೇರಿಸುವುದು, ಹೆಸರು ಸರಿಪಡಿಸಿಕೊಳ್ಳುವುದು, ಹೆಸರು ತೆಗೆಯುವುದು ಹಾಗು ಇನ್ನಿತರ ವಿಷಯಕ್ಕೆ ಆವಕಾಶ ಮಾಡಿಕೊಟ್ಟಿದ್ದಾರೆ. ಸಾಧ್ಯತೆ ಇದ್ದಲ್ಲಿ, ಅಂತಿಮ ಗಡುವನ್ನು ಫೆಬ್ರವರಿ 28ರ ತನಕ ವಿಸ್ತರಿಸುವುದರಿಂದ ಜನರಿಗೆ ತುಂಬಾ ಉಪಕಾರವಾದಿತು. ರಾಜ್ಯ ಸರಕಾರ ಮತ್ತು ಸಂಬಂಧ ಪಟ್ಟ ಇಲಾಖೆ ಇದರ ಬಗ್ಗೆ ಗಮನ ಹರಿಸಬೇಕಾಗಿ ಕಾರ್ಕಳ ವಿಧಾನಭಾ ಕ್ಷೇತ್ರ NSUI ಮಾಜಿ ಅಧ್ಯಕ್ಷ ದಿನಕರ್ ಶೆಟ್ಟಿ ವಿನಂತಿಸಿದ್ದಾರೆ.