Wednesday, February 4, 2026
Google search engine
Homeಕಾರ್ಕಳಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೃಷ್ಣ ಶೆಟ್ಟಿ ಬಜಗೋಳಿ ಗೆಲುವು

ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೃಷ್ಣ ಶೆಟ್ಟಿ ಬಜಗೋಳಿ ಗೆಲುವು

ಉಡುಪಿ:ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಆನ್ ಲೈನ್ ನಲ್ಲಿ ನಡೆದಿದ್ದ ಚುನಾವಣೆಯಲ್ಲಿ ಕೃಷ್ಣ ಶೆಟ್ಟಿ ಬಜಗೋಳಿ 6399 ಮತ ಪಡೆದು ಗೆಲುವು ಸಾಧಿಸಿದ್ದಾರೆ.ಚುನಾವಣೆಯಲ್ಲಿ ಐದು ಮಂದಿ ಸ್ಪರ್ಧಿಸಿದ್ದು ಕೃಷ್ಣ ಶೆಟ್ಟಿ ಅತೀ ಹೆಚ್ಚು ಮತಗಳನ್ನು ಪಡೆದುಕೊಂಡಿದ್ದಾರೆ.ಈ ಮೂಲಕ ಮುಂದಿನ 3 ವರ್ಷಕ್ಕೆ ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ ಜಿಲ್ಲಾದ್ಯಕ್ಷ ಸ್ಥಾನಕ್ಕೆ ಐದು ಮಂದಿ ನಾಮಪತ್ರ ಸಲ್ಲಿಸಿದ್ದರು.ಕೃಷ್ಣ ಶೆಟ್ಟಿ ಬಜಗೋಳಿ ಕಾರ್ಕಳ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ,ಉಡುಪಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ,ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕರ್ತ್ಯವ ನಿರ್ವಹಿಸಿದ್ದಾರೆ.

ರಾಜ್ಯದ ಗಮನ ಸೆಳೆದು ಬಿಜೆಪಿಯನ್ನೇ ಇಕ್ಕಟ್ಟಿನಲ್ಲಿ ಸಿಲುಕಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹೋರಾಟದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡದ್ದೇ ಈ ಕೃಷ್ಣ ಶೆಟ್ಟಿ.ಪರಶುರಾಮ ಥೀಮ್ ಪಾರ್ಕ್ ಸಂರಕ್ಷಣಾ ವೇದಿಕೆಯನ್ನು ಕಟ್ಟಿ ಹೋರಾಟವನ್ನು ಕಾನೂನು ದಿಕ್ಕಿಗೆ ತಿರುಗಿಸಿದ್ದರು.ಕೇವಲ ಹೇಳಿಕೆಗಳಿಗೆ ಸೀಮಿತವಾಗಿದ್ದ ವಿಚಾರವನ್ನು ಕೋರ್ಟ್ ಕಟಕಟೆಗೆ ಎಳೆದು ತರುವಲ್ಲಿ ಯಶಸ್ವಿಯಾಗಿದ್ದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments