Tuesday, July 8, 2025
Google search engine
Homeಕಾರ್ಕಳಮುಡಾರು ಗ್ರಾಮ ಪಂಚಾಯತ್ ದ್ವಿತೀಯ ಗ್ರಾಮಸಭೆ

ಮುಡಾರು ಗ್ರಾಮ ಪಂಚಾಯತ್ ದ್ವಿತೀಯ ಗ್ರಾಮಸಭೆ

ಮುಡಾರು ಗ್ರಾಮ ಪಂಚಾಯತ್ ದ್ವಿತೀಯ ಗ್ರಾಮಸಭೆ

ಬಜಗೋಳಿ ಮುಡಾರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ ದಿನಾಂಕ 24.03.2025 ರಂದು ಗ್ರಾಮ ಪಂಚಾಯತ್ ನ ವಿ.ಎಸ್. ಆಚಾರ್ಯ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಶ್ರೀಮತಿ ಶೃತಿ ಡಿ ಅತಿಕಾರಿ ಇವರು ವಹಿಸಿದರು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಂದ ಗ್ರಾಮಸ್ಥರಿಗೆ ಉಪಯುಕ್ತವಾದ ಮಾಹಿತಿಯನ್ನು ನೀಡಲಾಯಿತು.ಗ್ರಾಮ ಪಂಚಾಯತ್ ನ ಶೇಕಡಾ 25 ನಿಧಿಯ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ವೈಧ್ಯಕೀಯ ಸಹಾಯಧನ ಶೈಕ್ಷಣಿಕ ಸಹಾಯಧನ, ಹಳೆ ಮನೆ ರಿಪೇರಿ, ಅಂಗವಿಕಲರ ವೈಧ್ಯಕೀಯ ಸಹಾಯಧನ ಚೆಕ್ ವಿತರಿಸಲಾಯಿತು.

ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಸ್ಕೂಲ್ ಬ್ಯಾಗನ್ನು ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.ಮುಡಾರು ಗ್ರಾಮದ ಅಂಬೇಡ್ಕರ್ ಸಮುದಾಯ ಭವನಕ್ಕೆ ಮತ್ತು ಕೊರಗರ ಸಮುದಾಯ ಭವನಕ್ಕೆ ಬೇಕಾದ ಕುರ್ಚಿ, ಫ್ಯಾನ್, ಲೈಟ್ಸ್, ಸಿಂಟೆಕ್ಸ್ ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಲಾಯಿತು.ವಿಶೇಷ ಸಾಧನೆಗಾಗಿ ಸೃಜನಾ ಚಿಪ್ಲೂಣ್ಕರ್ ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.

ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಶೃತಿ ಡಿ ಅತಿಕಾರಿಯವರು ಗ್ರಾಮ ಪಂಚಾಯತ್ ಜನ ಸಾಮಾನ್ಯರ ಬೇಡಿಕೆಗೆ ಸಕರಾತ್ಮಕವಾಗಿ ಸ್ಪಂದಿಸುತ್ತ ಜನಪರವಾಗಿ ಅತ್ಯಂತ ಪಾರದರ್ಶಕವಾಗಿ ಕಾರ್ಯ ನಿರ್ವಹಿಸುತ್ತಿರುವುದಾಗಿ ತಿಳಿಸಿದರು.ಗ್ರಾಮ ಸಭೆಯಲ್ಲಿ ಬಂದ ಬೇಡಿಕೆಯನ್ನು ಸಾಧ್ಯವಾಗುವ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದು ತಿಳಿಸಿದರು.

ಈ ಸಭೆಯಲ್ಲಿ ನೋಡೆಲ್ ಅಧಿಕಾರಿಯವರಾದ ಸಿದ್ದಪ್ಪ ತುಡುಬಿನ, ಅಧ್ಯಕ್ಷರಾದ ಶೃತಿ ಡಿ ಅತಿಕಾರಿ, ಉಪಾಧ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಾಲತಿ ನಾಯ್ಕ್, ಸಂತೋಷ್ ಪೂಜಾರಿ, ಸದಸ್ಯರಾದ ಸುರೇಶ್ ಶೆಟ್ಟಿ, ಶಿವ ಪ್ರಸಾದ್, ಪ್ರಶಾಂತ್ ಕುಮಾರ್, ಸರಸ್ವತಿ ಆಚಾರ್ಯ, ಅಮೃತ ಪ್ರಭು, ವಿನಯ ಡಿ ಬಂಗೇರ, ಹರೀಶ್ ಪೂಜಾರಿ, ರಜತ್ ಆರ್ ಮೋಹನ್, ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಎಸ್ ಸ್ವಾಗತಿಸಿ ನಿರ್ವಹಿಸಿದರು, ಕಾರ್ಯದರ್ಶಿ ಜಯಕರ ಧನ್ಯವಾದವಿತ್ತರು

RELATED ARTICLES
- Advertisment -
Google search engine

Most Popular

Recent Comments

ಮುಡಾರು ಗ್ರಾಮ ಪಂಚಾಯತ್ ದ್ವಿತೀಯ ಗ್ರಾಮಸಭೆ

ಮುಡಾರು ಗ್ರಾಮ ಪಂಚಾಯತ್ ದ್ವಿತೀಯ ಗ್ರಾಮಸಭೆ

ಬಜಗೋಳಿ ಮುಡಾರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ ದಿನಾಂಕ 24.03.2025 ರಂದು ಗ್ರಾಮ ಪಂಚಾಯತ್ ನ ವಿ.ಎಸ್. ಆಚಾರ್ಯ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಶ್ರೀಮತಿ ಶೃತಿ ಡಿ ಅತಿಕಾರಿ ಇವರು ವಹಿಸಿದರು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಂದ ಗ್ರಾಮಸ್ಥರಿಗೆ ಉಪಯುಕ್ತವಾದ ಮಾಹಿತಿಯನ್ನು ನೀಡಲಾಯಿತು.ಗ್ರಾಮ ಪಂಚಾಯತ್ ನ ಶೇಕಡಾ 25 ನಿಧಿಯ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ವೈಧ್ಯಕೀಯ ಸಹಾಯಧನ ಶೈಕ್ಷಣಿಕ ಸಹಾಯಧನ, ಹಳೆ ಮನೆ ರಿಪೇರಿ, ಅಂಗವಿಕಲರ ವೈಧ್ಯಕೀಯ ಸಹಾಯಧನ ಚೆಕ್ ವಿತರಿಸಲಾಯಿತು.

ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಸ್ಕೂಲ್ ಬ್ಯಾಗನ್ನು ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.ಮುಡಾರು ಗ್ರಾಮದ ಅಂಬೇಡ್ಕರ್ ಸಮುದಾಯ ಭವನಕ್ಕೆ ಮತ್ತು ಕೊರಗರ ಸಮುದಾಯ ಭವನಕ್ಕೆ ಬೇಕಾದ ಕುರ್ಚಿ, ಫ್ಯಾನ್, ಲೈಟ್ಸ್, ಸಿಂಟೆಕ್ಸ್ ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಲಾಯಿತು.ವಿಶೇಷ ಸಾಧನೆಗಾಗಿ ಸೃಜನಾ ಚಿಪ್ಲೂಣ್ಕರ್ ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.

ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಶೃತಿ ಡಿ ಅತಿಕಾರಿಯವರು ಗ್ರಾಮ ಪಂಚಾಯತ್ ಜನ ಸಾಮಾನ್ಯರ ಬೇಡಿಕೆಗೆ ಸಕರಾತ್ಮಕವಾಗಿ ಸ್ಪಂದಿಸುತ್ತ ಜನಪರವಾಗಿ ಅತ್ಯಂತ ಪಾರದರ್ಶಕವಾಗಿ ಕಾರ್ಯ ನಿರ್ವಹಿಸುತ್ತಿರುವುದಾಗಿ ತಿಳಿಸಿದರು.ಗ್ರಾಮ ಸಭೆಯಲ್ಲಿ ಬಂದ ಬೇಡಿಕೆಯನ್ನು ಸಾಧ್ಯವಾಗುವ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದು ತಿಳಿಸಿದರು.

ಈ ಸಭೆಯಲ್ಲಿ ನೋಡೆಲ್ ಅಧಿಕಾರಿಯವರಾದ ಸಿದ್ದಪ್ಪ ತುಡುಬಿನ, ಅಧ್ಯಕ್ಷರಾದ ಶೃತಿ ಡಿ ಅತಿಕಾರಿ, ಉಪಾಧ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಾಲತಿ ನಾಯ್ಕ್, ಸಂತೋಷ್ ಪೂಜಾರಿ, ಸದಸ್ಯರಾದ ಸುರೇಶ್ ಶೆಟ್ಟಿ, ಶಿವ ಪ್ರಸಾದ್, ಪ್ರಶಾಂತ್ ಕುಮಾರ್, ಸರಸ್ವತಿ ಆಚಾರ್ಯ, ಅಮೃತ ಪ್ರಭು, ವಿನಯ ಡಿ ಬಂಗೇರ, ಹರೀಶ್ ಪೂಜಾರಿ, ರಜತ್ ಆರ್ ಮೋಹನ್, ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಎಸ್ ಸ್ವಾಗತಿಸಿ ನಿರ್ವಹಿಸಿದರು, ಕಾರ್ಯದರ್ಶಿ ಜಯಕರ ಧನ್ಯವಾದವಿತ್ತರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments