ಮತ್ತಾವು ಸೇತುವೆಗೆ ಅನುದಾನ ಮಂಜೂರು,ನಿರಂತರ ಹೋರಾಟಕ್ಕೆ ಸಂದ ಜಯ-ಶ್ರೀಧರ ಗೌಡ ಈದು

0

ಮತ್ತಾವು ಸೇತುವೆಗೆ ಅನುದಾನ ಮಂಜೂರು. ನಿರಂತರ ಹೋರಾಟಕ್ಕೆ ಸಂದ ಜಯ-ಶ್ರೀಧರ ಗೌಡ ಈದು

ಕಳೆದ ಎರಡು ದಶಕಗಳಿಂದ ಅರಣ್ಯ ಮೂಲ ಬುಡಕಟ್ಟು ಮಲೆಕುಡಿಯ ಸಮುದಾಯದ ಹಾಡಿಗೆ ಸಂಪರ್ಕ ಕಲ್ಪಿಸಲು ಸೇತುವೆಯ ನಿರ್ಮಾಣಕ್ಕಾಗಿ ನಿರಂತರ ಹೋರಾಟ ಮಾಡುತ್ತಾ ಬಂದಿದ್ದು, ಅರಣ್ಯ ಇಲಾಖೆಯ ಕಾನೂನು ತೊಡಕುಗಳಿದ್ದ ಹಿನ್ನೆಲೆಯಲ್ಲಿ ಸೇತುವೆ ನಿರ್ಮಾಣದ ಕನಸು ನನಸಾಗಲೆ ಇಲ್ಲ.

ಕೆಲವು ವರ್ಷದ ಹಿಂದೆ ಅರಣ್ಯ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿ ಇದೀಗ ಅನುಮತಿ ದೊರೆತ ಕಾರಣದಿಂದ 2 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿರುವುದು ಸಂತಸ ತಂದಿದೆ. ಸಹಕರಿಸಿದ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್ ಅವರಿಗೆ ಹಾಗೂ ಇಲಾಖಾಧಿಕಾರಿಗಳಿಗೆ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ ಈದು ಧನ್ಯವಾದ ತಿಳಿಸಿದ್ದಾರೆ.

   

LEAVE A REPLY

Please enter your comment!
Please enter your name here