ಮಿಯ್ಯಾರಿನಲ್ಲಿ ನಡೆದ ನಕಲಿ ಮತದಾನ,ಕೊನೆಗೂ ಕಾರ್ಕಳ ಠಾಣೆಯಲ್ಲಿ ದೂರು ದಾಖಲು
ಕಾರ್ಕಳ:ಮಿಯ್ಯಾರಿನಲ್ಲಿ ನಡೆದ ನಕಲಿ ಮತದಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಸಿಕ್ಕಿದ್ದು,ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಮಿಯ್ಯಾರು ಗ್ರಾಮದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತಾರಾನಾಥ್ ಕೋಟ್ಯಾನ್ ಕಾರ್ಕಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಿಯಾರು ಗ್ರಾಮದ ಮತಗಟ್ಟೆ ಸಂಖ್ಯೆ 155 ರಲ್ಲಿ ಸಂಜೆ 5:45 ಕ್ಕೆ ಅಪ್ರಾಪ್ತ ಬಾಲಕನೋರ್ವ ತನ್ನನ್ನು ಸುಹಾಸ್ ಶೆಟ್ಟಿ ಎಂದು ಮತಗಟ್ಟೆ ಅಧಿಕಾರಿಗಳಿಗೆ ಪರಿಚಯಿಸಿಕೊಂಡು ವಿದೇಶದಲ್ಲಿರುವ ಸುಹಾಸ್ ಶೆಟ್ಟಿರವರ ಹೆಸರಿನಲ್ಲಿ ಅಕ್ರಮವಾಗಿ ಮತ ಚಲಾಯಿಸಿದ್ದಾನೆ.
ಇದಕ್ಕೆ ನವೀನ್ ಮತ್ತು ಬಿಜೆಪಿ ಕಾರ್ಯಕರ್ತರಾದ ರೋಹಿತ್ ಶೆಟ್ಟಿ ಇವರು ಕಾನೂನು ಬಾಹಿರವಾಗಿ ಮತ ಚಲಾಯಿಸಲು ಕುಮ್ಮಕ್ಕು ನೀಡಿದ್ದಾರೆ ಎಂಬ ಅನುಮಾನ ಇರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.