ಮರಾಠ ಸಮಾಜದ ಸಂಸ್ಕಾರದ ಸಂಸ್ಕೃತಿ:ಆಡಳಿತ ಮೊಕ್ತೆಸರ ಗಿರೀಶ್ ರಾವ್ ನೇತೃತ್ವದಲ್ಲಿ 50 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ.
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಬ್ರಹ್ಮೋಪದೇಶ ಸಮಿತಿಯ ವತಿಯಿಂದ ದಿನಾಂಕ 04.05.2025 ರ ಭಾನುವಾರ ಮರಾಠ ವಟು ಸಾಮೂಹಿಕ ಬ್ರಹ್ಮೋಪದೇಶ ಶ್ರೀ ಕ್ಷೇತ್ರ ಹಿರಿಯoಗಡಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಲಿದೆ.
ಕ್ಷೇತ್ರದ ಆಡಳಿತ ಮೊಕ್ತೇಸರ ಗಿರೀಶ್ ರಾವ್ ಇವರ ನೇತೃತ್ವದಲ್ಲಿ ಸಮಾಜದ ಐವತ್ತಕ್ಕಿಂತ ಹೆಚ್ಚು ವಟುಗಳ ಸಾಮೂಹಿಕ ಬ್ರಹ್ಮೋಪದೇಶ ಜರಗಲಿದ್ದು ಇದರ ಜೊತೆಗೆ ಸಾರ್ವಜನಿಕ ಸತ್ಯನಾರಾಯಣ ಪೂಜೆ ಕೂಡ ಜರಗಲಿದೆ.
ಸುಮಾರು ಒಂದು ಸಾವಿರಕ್ಕಿಂತ ಹೆಚ್ಚು ಭಕ್ತಾಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು. ಮಧ್ಯಾಹ್ನ ಅನ್ನ ಸಂತರ್ಪಣೆ ನಂತರ ಯಕ್ಷಗಾನ ಕಾರ್ಯಕ್ರಮ ನೆರವೇರಲಿದೆ