ಡಾl ಎಂ.ಎನ್. ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್
ಮಂಗಳೂರು:ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಷಿಯೇಷನ್ ಆಫ್ ಕರ್ನಾಟಕ-ಬೆಂಗಳೂರು ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್’ ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳದ ಅಧ್ಯಕ್ಷ ಡಾl ಎಂ ಎನ್ ರಾಜೇಂದ್ರ ಕುಮಾರ್ ಆಯ್ಕೆಗೊಂಡಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜೂ 6ರಂದು ನಡೆಯುವ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ ಸಂದರ್ಭ ಪ್ರಶಸ್ತಿ ಪ್ರಧಾನ ನಡೆಯಲಿದೆ.
29ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಅಧ್ವಿತೀಯ ಸಾಧನೆ ಮಾಡಿರುವ ಡಾlಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿ ಬ್ಯಾಂಕನ್ನು ಜನಸ್ನೇಹಿಯಾಗಿ ರೂಪಿಸಿದ್ದಾರೆ.ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿ ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದುಕೊಟ್ಟಿದ್ದಾರೆ.ಕೋರ್ ಬ್ಯಾಂಕಿಂಗ್ ನಂತಹ ಉತ್ಕರ್ಷ್ಟ ತಂತ್ರಜ್ಞಾನವನ್ನು ಎಸಿಡಿಸಿಸಿ ಬ್ಯಾಂಕ್ ನಲ್ಲಿ ಅಳವಡಿಸಿದ್ದಾರೆ.ಮೊಬೈಲ್ ಬ್ಯಾಂಕ್ ಸೇವೆಯನ್ನು ರಾಜ್ಯದ ಸಹಕಾರ ರಂಗದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಹೆಗ್ಗಳಿಕೆ ಇವರದ್ದು.
ಸಹಕಾರ ಸಾಮಾಜಿಕ ಬ್ಯಾಂಕಿಂಗ್ ಧಾರ್ಮಿಕ ಹೀಗೆ ಹಲವಾರು ಕ್ಷೇತ್ರದಲ್ಲಿ ಅಧ್ವಿತೀಯ ಸಾಧಕರಾಗಿ ನವೋದಯ ಸ್ವಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿದ ರಾಜೇಂದ್ರ ಕುಮಾರ್ ರಾಜ್ಯದ ಯಶಸ್ವೀ ಸಹಕಾರಿ ನಾಯಕರಲ್ಲಿ ಒಬ್ಬರು.
ಮುಖ್ಯವಾಗಿ ಮಹಿಳಾ ಸಶಕ್ತೀಕರಣಕ್ಕೆ ಪ್ರಾಶಸ್ತ್ಯವನ್ನು ನವೋದಯ ಸ್ವಸಹಾಯ ಸಂಘಗಳ ಮೂಲಕ ನೀಡಿ ಆರ್ಥಿಕ ಚೈತನ್ಯ ತುಂಬಿದ್ದಾರೆ.ಎರಡನೇ ಭಾರಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಅವರು ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ಅಂಗದಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ್ದಾರೆ.