ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮಾನಹಾನಿಕರ ಹೇಳಿಕೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ನಗರ ಠಾಣೆಯಲ್ಲಿ ದೂರು ದಾಖಲು
ಮೇ.22 ರಂದು ಬೆಳ್ತಂಗಡಿಯಲ್ಲಿ ಬೆಜೆಪಿ ಪಕ್ದದ ವತಿಯಿಂದ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು, ಈ ವಿವಾದಾತ್ಮಕ ಹೇಳಿಕೆಯ ವಿರುದ್ದ ಇಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೇಸ್ ನಿಯೋಗ ದೂರು ದಾಖಲಿಸಿದೆ.
ಮುಖ್ಯಮಂತ್ರಿಗಳ ವಿರುದ್ದ ಶಾಸಕ ಪೂಂಜಾ ಆಡಿದ ಮಾತುಗಳು ಸತ್ಯಕ್ಕೆ ದೂರವಾಗಿದ್ದು ವಯಕ್ತಿಕ ನಿಂದನೆಯಿಂದ ಕೂಡಿದೆ, ಅವರ ಮಾನಹಾನಿ ಮಾಡಿದ ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾರ್ಕಳ ಕಾಂಗ್ರೆಸ್ ನಿಯೋಗ ಇಂದು ಕಾರ್ಕಳ ನಗರ ಪೊಲೀಸ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದೆ
ಈ ಸಂದರ್ಬದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಪುರಸಭಾ ಸದಸ್ಯ ವಕ್ತಾರ ಶುಭದ ರಾವ್, ಪುರಸಭಾ ಸದಸ್ಯ ಸೊಮನಾಥ್ ನಾಯ್ಕ್,ಮಾಜಿ ಸದಸ್ಯ ವಿವೇಕಾನಂದ ಶೆಣೈ, ನಗರ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಕಾಂತಿ ಶೆಟ್ಟಿ, ಸುನೀಲ್ ಭಂಡಾರಿ, ಬ್ರಯಾನ್ ಪಯಾಸ್ ಮತ್ತಿತರರು ಉಪಸ್ಥಿತರಿದ್ದರು.