ಸಾರ್ವಜನಿಕರಿಂದ ದೂರು ಹಿನ್ನಲೆ:ಹೆಬ್ರಿ ತಾಲೂಕು ಕಚೇರಿಗೆ ಭೇಟಿ ನೀಡಿದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ
ಹೆಬ್ರಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ಅನಾವಶ್ಯಕವಾಗಿ ವಿಳಂಬವಾಗುತ್ತಿದೆ ಎಂದು ಸಾರ್ವಜನಿಕರಿಂದ ಹಲವಾರು ದೂರು ಬಂದ ಹಿನ್ನಲೆಯಲ್ಲಿ
ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೆಬ್ರಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದರು.
ಈ ಸಂದರ್ಭ ಉಪತಹಸೀಲ್ದಾರ್ ಜತೆ ಚರ್ಚೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಸೂಕ್ತರೀತಿಯಲ್ಲಿ ಆಲಿಸಿ ಶೀಘ್ರದಲ್ಲಿ ಪರಿಹರಿಸುವಂತೆ ಮನವಿ ಮಾಡಿದರು.
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಬಾಯರಿ,ಪಂಚಾಯತ್ ಸದಸ್ಯ ಜನಾರ್ಧನ್ ,ಕರುಣಾಕರ,ಪ್ರಚಾರ ಸಮಿತಿ ಅಧ್ಯಕ್ಷ ನವೀನ ಕೆ. ಅಡ್ಯಂತಾಯ ,ಯುವ ಅಧ್ಯಕ್ಷ ದಿನೇಶ್ ಶೆಟ್ಟಿ,ಸಾಮಾಜಿಕ ಕಾರ್ಯಕರ್ತ ಹರೀಶ್ ಶೆಟ್ಟಿ, ನಿತಿನ್ ಎಸ್.ಪಿ. ಗೋಪಿನಾಥ್ ಭಟ್,ಸಂತೋಷ್, ವೆಂಕಟೇಶ್ ಉಪಸ್ಥಿತರಿದ್ದರು.
ತಾಲೂಕು ಕಚೇರಿಗಳಲ್ಲಿ ವಿನಾಕಾರಣ ಸಾರ್ವಜನಿಕರ ಕಡತಗಳು ವಿಲೇಯಾಗದೆ ಜನರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ಸಾರ್ವಜನಿಕರ ಹಿತದೃಷ್ಟಿಯಿಂದ ಸರಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ.ಇದೆಲ್ಲದರ ಪ್ರಯೋಜನಗಳನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾದರೆ ಅಧಿಕಾರಿ ಮತ್ತು ಸಿಬ್ಬಂದಿಯ ಪಾತ್ರವು ಪ್ರಮುಖವಾದುದು-ಉದಯ್ ಕುಮಾರ್ ಶೆಟ್ಟಿ