ಗಿರಿಜಾ ಸರ್ಜಿಕಲ್ಸ್ ವತಿಯಿಂದ ದಾದಿಯರ ದಿನಾಚರಣೆ
ಕರಾವಳಿ ಭಾಗದ ಪ್ರಖ್ಯಾತ ಸರ್ಜಿಕಲ್ಸ್ ಸಂಸ್ಥೆಯಾದ ಗಿರಿಜಾ ಸರ್ಜಿಕಲ್ಸ್ ಮತ್ತು ಸೀನಿಯರ್ ಜೇಸಿ ಟೆಂಪಲ್ ಸಿಟಿ ಉಡುಪಿ ಲಿಜಿನ್ ಇವರ ವತಿಯಿಂದ ಉಡುಪಿಯ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತಿರುವ ದಾದಿಯರನ್ನು ಗುರುತಿಸಿ ಗೌರವಿಸುವ ನೆಲೆಯಲ್ಲಿ ದಾದಿಯರ ( ನರ್ಸಸ್) ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಡಿಸ್ಟ್ರಿಕ್ಟ್ ಸರ್ಜಿನ್ ಆಗರುವ ಡಾ. ಅಶೋಕ್ ಅವರು, ಆಸ್ಪತ್ರೆಯ RMO ಆಗಿರುವ ಡಾ. ವಾಸುದೇವ, ಸೀನಿಯರ್ ಜೇಸಿಯ ಅಧ್ಯಕ್ಷ ಶ್ರೀ ಶಿವಾನಂದ್ ಶೆಟ್ಟಿಗಾರ್ ಮತ್ತು ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ನ ಮೆನೆಜಿಂಗ್ ಡೈರೆಕ್ಟರ್ ಆಗಿರುವ ರವೀಂದ್ರ ಶೆಟ್ಟಿ ಕಡೆಕಾರ್ ಇವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹಿರಿಯ 5 ಜನ ದಾದಿಯರನ್ನು ಸನ್ಮಾನಿಸಿ ಉಳಿದ ಎಲ್ಲಾ ದಾದಿಯರನ್ನು ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಯೀತು.