Sunday, January 25, 2026
Google search engine
Homeಕಾರ್ಕಳಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ 5.00 ಕೋಟಿ ರೂಪಾಯಿ ಅನುದಾನ ಬಿಡುಗಡೆ.-ವಿ ಸುನಿಲ್‌ ಕುಮಾರ್

ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ 5.00 ಕೋಟಿ ರೂಪಾಯಿ ಅನುದಾನ ಬಿಡುಗಡೆ.-ವಿ ಸುನಿಲ್‌ ಕುಮಾರ್

ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ 5.00 ಕೋಟಿ ರೂಪಾಯಿ ಅನುದಾನ ಬಿಡುಗಡೆ.-ವಿ ಸುನಿಲ್‌ ಕುಮಾರ್

ಕಾರ್ಕಳ:ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರಕಾರದಿಂದ ರೂ. 05.00 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕ ವಿ‌. ಸುನಿಲ್ ಕುಮಾರ್ ತಿಳಿಸಿದ್ದಾರೆ

ಕಾರ್ಕಳದ ಜೋಡುಕಟ್ಟೆಯಿಂದ ಬೋರ್ಕಟ್ಟೆ-ರೆಂಜಾಳ-ಇರ್ವತ್ತೂರು-ಸಾಣೂರು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಜೊತೆಗೆ ಈ ರಸ್ತೆಯಲ್ಲಿ ಅತ್ಯಂತ ತಿರುವುಗಳಿದ್ದು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ವಿ.ಸುನಿಲ್‌ ಕುಮಾರ್‌ ರವರು ರಸ್ತೆ ಅಭಿವೃದ್ಧಿ ಪಡಿಸುವಂತೆ ಪ್ರಸ್ತಾವನೆ ಸಲ್ಲಿಸಿ ನಿರಂತರ ಪ್ರಯತ್ನದ ಕಾರಣ ಇದೀಗ ಸದ್ರಿ ರಸ್ತೆ ಅಭಿವೃದ್ಧಿಗೆ ರೂ.05.00 ಕೋಟಿ ಅನುದಾನ ಬಿಡುಗಡೆಗೊಂಡಿರುತ್ತೆ.

ಶಾಸಕರ ವಿಶೇಷ ಮುತುವರ್ಜಿ ಹಾಗೂ ನಿರಂತರ ಪ್ರಯತ್ನದಿಂದಾಗಿ ಸರಕಾರದಿಂದ ಅನುದಾನ ಮಂಜೂರಾಗಿದ್ದು, ಆದಷ್ಟೂ ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಿಲಾಗುವುದು ಎಂದು ಕಾರ್ಕಳ ಶಾಸಕರ ʻವಿಕಾಸʼ ಜನಸೇವಾ ಕಛೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments