ಮಾಳ: ಶ್ರೀ ಗುರುಕುಲ ಶಾಲೆಯಲ್ಲಿ ವಿಶ್ವ ಪರಿಸರ ದಿನ
ಅರಣ್ಯ ಇಲಾಖೆ, ಕುದುರೆಮುಖ ವನ್ಯಜೀವಿ ವಿಭಾಗ ಕಾರ್ಕಳ ವಲಯ ಹಾಗೂ ಮಾಳ ಗ್ರಾಮ ಪಂಚಾಯತ್ ನೇತ್ರತ್ವದಲ್ಲಿ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಗ್ರಾಮ ಪಂಚಾಯತ್ ಮಾಳ ಇಲ್ಲಿನ ಪಿಡಿಒ ಶ್ರೀನಿವಾಸ್, ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪ ವಲಯ ಅರಣ್ಯಾಧಿಕಾರಿ ಅಜಿತ್ ಕುಮಾರ್ ವಿದ್ಯಾರ್ಥಿಗಳಿಗೆ ಅರಣ್ಯ ಸಂರಕ್ಷಿಸುವುದರ ಬಗ್ಗೆ ಮತ್ತು ಗಿಡಗಳನ್ನು ನೆಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ವಿವರವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯ ಅಧಿಕಾರಿ ರಾಜು ಎಲ್. ಜೆ. ಅರಣ್ಯ ವೀಕ್ಷಕರಾದ ಗುರುರಾಜ್ ಉದಯ್ ಕುಮಾರ್, ದಾಮೋದರ್ ,ಶ್ರೀ ವಿದ್ಯಾವರ್ಧಕ ಸಂಘ ಮಾಳ ಇದರ ಕಾರ್ಯದರ್ಶಿ ಗೀತಾ ಸೇರಿಗಾರ್ ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಶೋಭಾ ಸ್ವಾಗತಿಸಿದರೆ, ಶಿಕ್ಷಕಿ ಜ್ಯೋತಿ ವಂದಿಸಿದರು.