ಕಾರ್ಕಳ : ಆಂಬುಲೆನ್ಸ್ ಹಾಗೂ ದ್ವಿಚಕ್ರ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ
ಆಂಬುಲೆನ್ಸ್ ಚಾಲಕ ವಿರುದ್ಧ ದಿಕ್ಕಿನಲ್ಲಿ ಬಂದು ಬೈಕಿಗೆ ಡಿಕ್ಕಿಯಾದ ಘಟನೆ ಕಾರ್ಕಳದ ದೂಪದಕಟ್ಟೆ ಬಳಿ ನಡೆದಿದೆ. ಘಟನೆ ಪರಿಣಾಮ ದ್ವಿಚಕ್ರ ಸವಾರರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ಸಂಚರಿಸುತ್ತಿದ್ದ ದ್ವಿಚಕ್ರಕ್ಕೆ, ಅತ್ತೂರು ಚರ್ಚ್ ಕಡೆಯಿಂದ ಪಡುಬಿದ್ರಿ ಕಡೆಗೆ ವೇಗವಾಗಿ ಹಾಗೂ ಅಜಾಗರಿಕತೆಯಿಂದ ಆಂಬುಲೆನ್ಸ್ ಚಲಾಯಿಸಿಕೊಂಡು ಬಂದ ಆಂಬುಲೆನ್ಸ್ ಚಾಲಕ ಗಜೇಂದ್ರ ದೂಪದಕಟ್ಟೆ ಜಂಕ್ಷನ್ನಲ್ಲಿರುವ ವೃತ್ತವನ್ನು ಬಳಸದೆ ವಿರುದ್ಧ ದಿಕ್ಕಿನಿಂದ ವಾಹನ ಚಲಾಯಿಸುತ್ತಾ ಬಂದಿದ್ದಾನೆ. ಈ ವೇಳೆ ಮುಂದಿನಿಂದ ಬರುತ್ತಿದ್ದ ದ್ವಿಚಕ್ರಕ್ಕೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಾಹನಗಳೆರಡೂ ಜಖಂ ಗೊಂಡಿದ್ದು, ದ್ವಿಚಕ್ರ ಸವಾರರಿಬ್ಬರಿಗೆ ತೀವ್ರತರ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.