ಬೆಳ್ಮಣ್ಣು ಕಾರು ಮತ್ತು ಟೆಂಪೋ ಚಾಲಕ ಮಾಲಕರ ಸಂಘ ಅಧ್ಯಕ್ಷರಾಗಿ ಸುರೇಂದ್ರ ಶೆಟ್ಟಿ ಮತ್ತು ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ 

0
ಬೆಳ್ಮಣ್ಣು ಕಾರು ಮತ್ತು ಟೆಂಪೋ ಚಾಲಕ ಮಾಲಕರ ಸಂಘ
ಅಧ್ಯಕ್ಷರಾಗಿ ಸುರೇಂದ್ರ ಶೆಟ್ಟಿ ಮತ್ತು ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ 
ಬೆಳ್ಮಣ್ಣು ಕಾರು ಮತ್ತು ಟೆಂಪೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಬೆಳ್ಮಣ್ಣು ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಸುರೇಂದ್ರ ಶೆಟ್ಟಿ, ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಈ ಸಭೆಯಲ್ಲಿ ಉಡುಪಿ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಶೋಸಿಯೇಶನ್ ಪ್ರದಾನ ಕಾರ್ಯದರ್ಶಿಯಾದ ರಮೇಶ್ ಕೋಟ್ಯಾನ್, ಕಾರ್ಯದರ್ಶಿ ಕೃಷ್ಣ ಪೂಜಾರಿ ಹಾಗೂ ಬೆಳ್ಮಣ್ಣು ವಲಯದ ಮಾಜಿ ಅಧ್ಯಕ್ಷರಾದ ವಲ್ಟಾರ್ ಡಿಸೋಜಾ, ಕಾರ್ಯದರ್ಶಿ ದಿನೇಶ್ ಕುಲಾಲ್ ಉಪಸ್ಥಿತಿತರಿದ್ದರು.
ಮಹಾಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ ಮಾಡಲಾಯಿತು ಹಾಗೂ ಸಂಘದ ಸದಸ್ಯರ ಮಕ್ಕಳಿಗೆ (ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿವೇತನ ವಿತರಣೆ ಮಾಡಲಾಯಿತು. ಗನೇಶ್ ದೇವಾಡಿಗ ಅವರು ಕಾರ್ಯಕ್ರಮ ನಿರೂಪಿಸಿದರು.
   

LEAVE A REPLY

Please enter your comment!
Please enter your name here