ಕಾರ್ಕಳ: ಕೊಳಕ್ಕೆ ಇರ್ವತ್ತೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ರಾಜೇಂದ್ರ ಪೂಜಾರಿ ಆಯ್ಕೆ

0
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷ ರಾಜೇಂದ್ರ ಪೂಜಾರಿ

ಕೊಳಕ್ಕೆ ಇರ್ವತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಹಾಸಭೆಯು ಅಧ್ಯಕ್ಷರಾದ ದಿನೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಸಮಿತಿಗೆ ನೂತನ ಅಧ್ಯಕ್ಷರಾಗಿ ರಾಜೇಂದ್ರ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ಪ್ರಸಾದ್ ದೇವಾಡಿಗ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ವರ್ಷ 23ನೇ ಸಾರ್ವಜನಿಕ ಗಣೇಶೋತ್ಸವವು ಕೊಳಕ್ಕೆ ಇರ್ವತ್ತೂರು ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಲಿದೆ.

ಸಮಿತಿಗೆ ಗೌರವಾಧ್ಯಕ್ಷರಾಗಿ ಊರಿನ ಪ್ರಮುಖರಾದ ಜಯಕೀರ್ತಿ ಕಡಂಬ,ಡಾ. ಐ. ಜಿ. ಭಟ್,ಭಾಸ್ಕರ್ ಕೋಟ್ಯಾನ್ ಹಾಗೂ ಕೋಶಾಧಿಕಾರಿಯಾಗಿ ಮಿಥುನ್ ಪೂಜಾರಿ ಹಾಗೂ ಕಾರ್ಯಕಾರಿ ಸದಸ್ಯರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಊರಿನ ಪ್ರಮುಖರು ಉಪಸ್ಥಿತರಿದ್ದರು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷ ರಾಜೇಂದ್ರ ಪೂಜಾರಿ
ಕಾರ್ಯದರ್ಶಿ: ಪ್ರಸಾದ್ ದೇವಾಡಿಗ ಗಣೇಶೋತ್ಸವ ಸಮಿತಿ ಕೊಳಕೆ ಇರ್ವತ್ತೂರು
   

LEAVE A REPLY

Please enter your comment!
Please enter your name here