ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಸಂಯೋಜನೆಯಲ್ಲಿ ಜು. 24ರ ಸಂಜೆ 4.30ಕ್ಕೆ ಕಾರ್ಕಳದ ಹೋಟೆಲ್ ಪ್ರಕಾಶ್ ಸಂಭ್ರಮ ಹಾಲ್ ನಲ್ಲಿ ವಿಶ್ವಕುಂದಾಪ್ರ ಕನ್ನಡ ದಿನಾಚರಣೆ ಜರಗಲಿದೆ.
ಹಿರಿಯ ಸಾಹಿತಿ ಹಾಗೂ ಸಾಂಸ್ಕೃತಿಕ ಚಿಂತಕ ಎ. ಎಸ್. ಎನ್. ಹೆಬ್ಬಾರ್ ಕುಂದಾಪುರ ಅವರು ಭಾಷಿ ಅಲ್ಲ ಬದ್ಕ್ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಷಾಡ ದಿನಗಳ ವಿಶೇಷ ತಿಂಡಿ ತಿನಿಸುಗಳ ಖಾದ್ಯವಿರುತ್ತದೆ ಎಂದು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಲ್ಲಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.