ನಾಲ್ಕೂರು ನರಸಿಂಗ ರಾವ್ ಸ್ಮಾರಕ ಸರಕಾರಿ ಪದವಿ ಪೂರ್ವ ಕಾಲೇಜು, ಶಿರ್ಲಾಲು ಪ್ರೌಢಶಾಲಾ ವಿಭಾಗದ ಇಂಟರಾಕ್ಟ್ ಕ್ಲಬ್ ನ ಪದಗ್ರಹಣ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಿತು.
ಸಭಾಧ್ಯಕ್ಷತೆಯನ್ನು ವಹಿಸಿದ ಇಂಟರಾಕ್ಟ್ ಕ್ಲಬ್ ನ ನೂತನ ಅಧ್ಯಕ್ಷೆ ತಸ್ರಿಫಾ ಮತ್ತು ಕಾರ್ಯದರ್ಶಿ ಸುಧೀಕ್ಷಾ ಇವರಿಗೆ ಪದಪ್ರದಾನ ನೆರವೇರಿಸಿ ಮಾತನಾಡಿದ ಕಾರ್ಕಳ ರೋಟರಿ ಕ್ಲಬ್ ನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ವಿದ್ಯಾರ್ಥಿಗಳು ಎಳೆಯ ಪ್ರಾಯದಲ್ಲಿ ಪರಿಸರ ಸಂರಕ್ಷಣೆಯ ಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜ ಸೇವೆಯ ಗುಣವನ್ನು ಅಳವಡಿಸಿಕೊಂಡು ದೇಶದ ಸತ್ಪ್ರಜೆಗಳಾಗಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಇಂಟರಾಕ್ಟ್ ಕ್ಲಬ್ಬಿನ ಚೇರ್ಮನ್ ಬಾಲಕೃಷ್ಣ ದೇವಾಡಿಗ ಇಂಟರಾಕ್ಟ್ ಕ್ಲಬ್ ನಿಂದ ಮಾಡಬಹುದಾದ ಕಾರ್ಯಕ್ರಮಗಳು, ಪದಾಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು.
ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಕೆ. ಗುಣಪಾಲ ಕಡಂಬ, ರೋಟರಿ ಕ್ಲಬ್ನ ಕಾರ್ಯದರ್ಶಿ ಚೇತನ್ ನಾಯಕ್, ಸದಸ್ಯರಾದ ಶೇಖರ್ ಹೆಚ್. ಉಪಸ್ಥಿತರಿದ್ದು ಶುಭ ಹಾರೈಸಿದರು.
ಪ್ರಾಂಶುಪಾಲ ಬೇಬಿ ಕೆ. ಈಶ್ವರ ಮಂಗಲ ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ಇಂಟರ್ಯಾಕ್ಟ್ ಕ್ಲಬ್ ನ ಮಾರ್ಗದರ್ಶಿ ಶಿಕ್ಷಕ ನಾರಾಯಣ ಪೂಜಾರಿ ಎನ್ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕ ಸತೀಶ್ ವಂದಿಸಿದರು.