Monday, January 26, 2026
Google search engine
Homeಕಾರ್ಕಳಕಾಬೆಟ್ಟು: ಸರಕಾರಿ ಪ್ರೌಢಶಾಲೆಯಲ್ಲಿ ಪತ್ರಿಕಾ ಮಾಹಿತಿ ವರದಿಗಾರಿಕೆ ತರಬೇತಿ ಕಾರ್ಯಗಾರ

ಕಾಬೆಟ್ಟು: ಸರಕಾರಿ ಪ್ರೌಢಶಾಲೆಯಲ್ಲಿ ಪತ್ರಿಕಾ ಮಾಹಿತಿ ವರದಿಗಾರಿಕೆ ತರಬೇತಿ ಕಾರ್ಯಗಾರ

 

ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಯಲ್ಪಡುವ ಪತ್ರಿಕಾ ರಂಗ ಸಮಾಜದ ಅಂಕುಡೊಂಕುಗಳನ್ನು ತಿದ್ದುವುದರ ಜೊತೆಗೆ ಮಾಹಿತಿ ನೀಡುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ನಿರಂತರ ಪತ್ರಿಕೆ ಯನ್ನು ಓದುವುದರಿಂದ ತಮ್ಮ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಪತ್ರಕರ್ತ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷ ಹೆಬ್ರಿ ಉದಯ್ ಕುಮಾರ್ ಶೆಟ್ಟಿ ಹೇಳಿದರು.

ಅವರು ಕಾರ್ಕಳ ಕಾಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಕಾರ್ಕಳ ನೇತೃತ್ವದಲ್ಲಿ ಕಾಬೆಟ್ಟು ಸರಕಾರಿ ಪ್ರೌಢಶಾಲೆಯ ಇಂಟ್ರಾಕ್ಟ್ ಕ್ಲಬ್ ನ ಸಹಯೋಗದೊಂದಿಗೆ ನಡೆದ ಪತ್ರಿಕೆ ಮಾಹಿತಿ ಹಾಗೂ ವರದಿಗಾರಿಕೆ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ಪತ್ರಿಕೆಗಳ ಕಾರ್ಯವೈಖರಿ ಮತ್ತು ಸುದ್ದಿ ತಯಾರಿಕೆ ಬಗ್ಗೆ ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡಿ ಪತ್ರಿಕೆಯೆಂದರೆ ಹರಿತವಾದ ಲೇಖನಿ ಇದ್ದಂತೆ. ಪೆನ್ನಿಗೆ ಇರುವ ಶಕ್ತಿಯಿಂದ ಸಮಾಜದ ಹಾಗೂ ರಾಜಕಾರಣದ ವಿವಿಧ ಸಮಸ್ಯೆಗಳನ್ನು ಬಯಲಿಗೆಳೆಯುವುದರ ಇದರ ಜೊತೆಗೆ ಬಗೆಹರಿಸಲು ನೆರವಾಗುತ್ತದೆ. ಇಂದು ಪತ್ರಿಕೆ ಓದುವರ ಸಂಖ್ಯೆ ಕಡಿಮೆ ಆಗುತ್ತಿರುವುದು ಬೇಸರ ಸಂಗತಿ.ಈ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲಿ ಮಕ್ಕಳು ಪತ್ರಿಕೆ ಮತ್ತು ಉತ್ತಮ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಿ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಇಂಟರಾಕ್ಟ್ ಕ್ಲಬ್ ಅಧ್ಯಕ್ಷೆ ಸಾಕ್ಷಿ ವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಕಳ ರೋಟರಿ ಕ್ಲಬ್ ನ ಕಾರ್ಯದರ್ಶಿ ಚೇತನ್ ನಾಯಕ್, ಪೂರ್ವಾಧ್ಯಕ್ಷ ಶೈಲೇಂದ್ರ ರಾವ್, ಜೆರಾಲ್ಡ್ ಕುಟಿನೋ,ಬಾಲಕೃಷ್ಣ ದೇವಾಡಿಗ, ವಸಂತ್ ಎಂ., ಶ್ರೇಷ್ಟಾ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕ ಅಶೋಕ್ ಸ್ವಾಗತಿಸಿ, ಸೌಮ್ಯಮಣಿ ಕಾರ್ಯಕ್ರಮ ನಿರೂಪಿಸಿ,ಶಾಲಾ ಮುಖ್ಯ ಶಿಕ್ಷಕಿ ಇಂದಿರಾ ವಂದಿಸಿದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments