Home ಕಾರ್ಕಳ ಕಾರ್ಕಳ: ಉದಯ್ ಶೆಟ್ಟಿಗೆ ಬೆಂಬಲ ಸೂಚಿಸಿದ ಪರಶುರಾಮ‌ ಹಿತರಕ್ಷಣಾ ಸಮಿತಿ

ಕಾರ್ಕಳ: ಉದಯ್ ಶೆಟ್ಟಿಗೆ ಬೆಂಬಲ ಸೂಚಿಸಿದ ಪರಶುರಾಮ‌ ಹಿತರಕ್ಷಣಾ ಸಮಿತಿ

0

 

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ರಾಜಕೀಯೇತರ ಸಮಿತಿಯಾಗಿದ್ದು, ಕಾರ್ಕಳ ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸುವ ಧಾರ್ಮಿಕ ಶ್ರದ್ದೆಯ ಸದುದ್ದೇಶವನ್ನು ಹೊಂದಿ ಅಸ್ತಿತ್ವಕ್ಕೆ ಬಂದಿರುತ್ತದೆ. ಇದೀಗ ಕಾರ್ಕಳದ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಾನ್ಯ ಉದಯ ಕುಮಾರ್ ಶೆಟ್ಟಿಯವರು ನಮ್ಮ ಸಮಿತಿಯು ಹೊಂದಿದ್ದ ಸದುದ್ದೇಶವನ್ನೇ ಇಟ್ಟುಕೊಂಡು ಮಾನ್ಯ ಉಚ್ಛ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದರಿಂದ ಈ ಸಂಧರ್ಭ ನಮ್ಮ ಸಮಿತಿಯು ಯಾವುದೇ ನಿರ್ಣಯವನ್ನು ಕೈಗೊಂಡರೇ ಕಾನೂನಿನ ತೊಡಕಾಗುವ ಸಾಧ್ಯತೆ ಇದ್ದು ಇದು ಮಾನ್ಯ ಉದಯ ಕುಮಾರ್ ಶೆಟ್ಟಿಯವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ತೊಂದರೆಯಾಗುವ ಸಂಭವ ಇರುವುದರಿಂದ ಮಾನ್ಯ ಉದಯ್ ಕುಮಾರ್ ಶೆಟ್ಟಿಯವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಪೂರ್ಣವಾಗಿ ಬೆಂಬಲವನ್ನು ನೀಡುವ ಉದ್ದೇಶದಿಂದ ಈ ಸಮಿತಿಯನ್ನು ಬರ್ಖಾಸ್ತುಗೊಳಿಸುವ ನಿರ್ಣಯವನ್ನು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಸಭೆ ಸೇರಿ ತೆಗೆದುಕೊಂಡಿರುತ್ತದೆ.

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯ ಎಲ್ಲ ಪಧಾಧಿಕಾರಿಗಳು ಮತ್ತು ಸದಸ್ಯರು ಮಾನ್ಯ ಉದಯ ಕುಮಾರ್ ಶೆಟ್ಟಿಯವರ ನಿಲುವಿಗೆ ಮತ್ತು ಕಾನೂನಾತ್ಮಕ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ನಿರ್ಣಯಿಸಿ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯನ್ನು ಬರ್ಖಾಸ್ತುಗೊಳಿಸಿರುವುದಾಗಿ ಈ ಪತ್ರಿಕಾ ಪ್ರಕಟಣೆಯ ಮೂಲಕ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ತಿಳಿಸಿದೆ. ಇನ್ನು ಮುಂದೆ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಅಸ್ತಿತ್ವದ್ಲಲಿ ಇರುವುದಿಲ್ಲ.

ಜಾಹೀರಾತು

NO COMMENTS

LEAVE A REPLY

Please enter your comment!
Please enter your name here