
ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ರೂ. ಕೊಡುತ್ತೇವೆ ಎನ್ನುವ ಅಭಿಯಾನ ಆರಂಭಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆಯಿಲ್ಲದಂತಾಗಿದೆ. ರಾಜ್ಯದಲ್ಲಿರುವುದು ಮುಸ್ಲಿಮರ ಸರ್ಕಾರವಾಗಿದೆ. ಅಹಿಂದ ರಕ್ಷಣೆಯಾಗುತ್ತಿಲ್ಲ. ಅಲ್ಪಸಂಖ್ಯಾತರಲ್ಲೂ ಮುಖ್ಯವಾಗಿ ಮುಸ್ಲಿಮರನ್ನು ರಕ್ಷಿಸಲಾಗುತ್ತಿದೆ. ಮುಸ್ಲಿಂ ಯುವತಿಯರನ್ನು ಪ್ರೀತಿಸಬಾರದು ಹಾಗೂ ಮದುವೆಯಾಗಬಾರದು ಎನ್ನುವ ಕಾನೂನು ಇದೆಯೇ ಎಂದು ಪ್ರಶ್ನಿಸಿದರು.



































