
15 ನೇ ವರ್ಷದ ಸಂಭ್ರಮದಲ್ಲಿರುವ ನಂದಳಿಕೆ ಶ್ರೀ ಗುರುದುರ್ಗಾ ಮಿತ್ರ ಮಂಡಳಿ ಹಾಗೂ ಮಹಿಳಾ ಮಂಡಳಿ ವತಿಯಿಂದ ಬೋರ್ಡ್ ಶಾಲೆ ಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.
ಬೆಳ್ಮಣ್ಣು ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಈ ಸಾಲಿನ ಅಧ್ಯಕ್ಷರಾದ ವಸಂತ್ ಕುಮಾರ್ ನಂದಳಿಕೆ ಉದ್ಘಾಟಿಸಿ, ಆಟಿಡೊಂಜಿ ದಿನದ ಬಗ್ಗೆ ಮಾತನಾಡಿದರು.
ಗುರುದುರ್ಗಾ ಮಿತ್ರ ಮಂಡಳಿ ಅಧ್ಯಕ್ಷ ಅಶ್ವಥ್ ಶೆಟ್ಟಿ, ಮಹಿಳಾಮಂಡಳಿ ಅಧ್ಯಕ್ಷ ಸುನೀತಾ ನೋರಣ್ಣ ಅಧ್ಯಕ್ಷತೆ ವಹಿಸಿದ್ದರು.
ಮಿತ್ರ ಮಂಡಳಿಯ ಗೌರವ ಅಧ್ಯಕ್ಷರಾದ ಕಿರಣ್ ಚೌಟ, ಮಹಿಳಾ ಮಂಡಳಿಯ ಗೌರವಾಧ್ಯಕ್ಷರಾದ ಜಾಯ್ಸ್ ಟೆಲ್ಲಿಸ್, ಮಿತ್ರ ಮಂಡಳಿಯ ಕಾರ್ಯದರ್ಶಿ ವಿನೋದ್ ಆಚಾರ್ಯ ಉಪಸ್ಥಿತರಿದ್ದರು. ಮಹಿಳಾ ಮಂಡಳಿಯ ಕಾರ್ಯದರ್ಶಿ ವೀಣಾ ಹರೀಶ್ ಪೂಜಾರಿ ವಂದಿಸಿ, ಹರಿಪ್ರಸಾದ್ ನಂದಳಿಕೆ ಕಾರ್ಯಕ್ರಮ ನಿರೂಪಿಸಿದರು.



































