ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್:ಎರಡು ದಿನಗಳ ನಾಯಕತ್ವ ತರಬೇತಿ ಶಿಬಿರ
ಎಂ.ಆರ್. ಪೈ ಫೌಂಡೇಶನ್ ಮುಂಬೈ ಇದರ ವತಿಯಿಂದ ಎರಡು ದಿನಗಳ ನಾಯಕತ್ವ ತರಬೇತಿ ಶಿಬಿರವು ಸ್ಥಳೀಯ ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್ ಕಾರ್ಕಳ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸಿದ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇಲ್ಲಿನ ಪ್ರಾಂಶುಪಾಲರಾದ ಡಾ. ಮಂಜುನಾಥ್ ಕೋಟ್ಯಾನ್ ಇವರು ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಮಹತ್ವದ ಬಗ್ಗೆ ತಿಳಿಸಿದರು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭುವನೇಂದ್ರ ಕಾಲೇಜು ಕಾರ್ಕಳ ಇಲ್ಲಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಸುಚಿತ್ರ ಇವರು ಮಾತನಾಡಿ ಯಾರು ಎಲ್ಲರನ್ನು ಕೈ ಹಿಡಿದುಕೊಂಡು ಮುಂದೆ ನಡೆಸುತ್ತಾನೋ ಅವನೇ ನಿಜವಾದ ನಾಯಕ ಎಂದು ಹೇಳಿದರು.
ಸಂಸ್ಥೆಯ ಪ್ರಾಂಶುಪಾಲರಾದ ರಾಘವೇಂದ್ರ ಸಾಲಿಯಾನ್ ಅವರು ಸ್ವಾಗತಿಸಿದರು. ಶಿಬಿರದ ತರಬೇತುದಾರರಾದ ರಾಜೀವ್ ಲೂ ಹಾಗೂ ಕ್ಲಾರಿಸಾ ಜತ್ತನ್ನ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಸಂಚಾಲಕರಾದ ಕೆ. ವೆಂಕಟೇಶ್ ಪ್ರಭು ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿಗಳಾದ ಪ್ರಣಮ್ಯ,ಜೈ ಆದಿತ್ಯ,ಆಯುಷ್ ಹಾಗೂ ಮಧುರ ಇವರು ಶಿಬಿರದ ಅನುಭವಗಳನ್ನು ಹಂಚಿಕೊಂಡರು.ಲೆನೋರ ಡಿಸೋಜ ಹಾಗೂ ಯುವನ್ ಇವರು ಕಾರ್ಯಕ್ರಮವನ್ನು ನಿರೂಪಿಸಿ ತನುಶ್ರೀ ಹಾಗೂ ಅಶ್ವಿಜ್ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.