Home ಕಾರ್ಕಳ ಕ್ರೈಸ್ಟ್ ಕಿಂಗ್: ಕುಸ್ತಿ ಪಂದ್ಯಾಟದಲ್ಲಿ ಸುದೀಕ್ಷಾ ಮತ್ತು ದ್ರುವೀತ್ ರಾಜ್ಯಮಟ್ಟಕ್ಕೆ ಆಯ್ಕೆ

ಕ್ರೈಸ್ಟ್ ಕಿಂಗ್: ಕುಸ್ತಿ ಪಂದ್ಯಾಟದಲ್ಲಿ ಸುದೀಕ್ಷಾ ಮತ್ತು ದ್ರುವೀತ್ ರಾಜ್ಯಮಟ್ಟಕ್ಕೆ ಆಯ್ಕೆ

0

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಉಪನಿರ್ದೇಶಕರ ಕಛೇರಿ ಜಿಲ್ಲಾ ಪಂಚಾಯತ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ವೆಂಕಟರಮಣ ಆಂಗ್ಲಮಾಧ್ಯಮ ಶಾಲೆ ಕುಂದಾಪುರ ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ 14/17 ರ ವಯೋಮಿತಿಯ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದಲ್ಲಿ ಎಂಟನೇ ತರಗತಿಯ ದ್ರುವೀತ್ ಹಾಗೂ ಬಾಲಕಿಯರ ವಿಭಾಗದಲ್ಲಿ ಎಂಟನೇ ತರಗತಿಯ ಸುದೀಕ್ಷಾ ಚಿನ್ನದ ಪದಕಗಳನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ ಏಳನೇ ತರಗತಿಯ ಮೊಹಮ್ಮದ್ ಹಿಶಾಮ್ ಖಾನ್ ಮತ್ತು ಸಾದ್ವಿ ನಾಯಕ್, ಹತ್ತನೇ ತರಗತಿಯ ರೇಚಲ್ಡಿ ’ಸೋಜ ಮತ್ತು ಲೆನಿಷಾ ಮೆಂಡೋನ್ಸಾ ಬೆಳ್ಳಿ ಪದಕ, ಆರನೇ ತರಗತಿಯ ಮೊಹಮ್ಮದ್ ಅತಿಫ್ ಮತ್ತು ಪ್ರೀತಿ ಪೂಜಾರಿ, ಏಳನೇ ತರಗತಿಯ ಮಾನಸ್, ಒಂಬತ್ತನೇ ತರಗತಿಯ ಸಾನ್ವಿ ಎಂ. ನಾಯಕ್ ಕಂಚಿನ ಪದಕಗಳನ್ನು ಪಡೆದಿದ್ದಾರೆ.

 

ಜಾಹೀರಾತು

NO COMMENTS

LEAVE A REPLY

Please enter your comment!
Please enter your name here