Monday, January 26, 2026
Google search engine
Homeಕಾರ್ಕಳವಿದ್ಯಾರ್ಥಿಗಳು ಸ್ವಾತಂತ್ರ್ಯದ ಹಕ್ಕುಗಳೊಂದಿಗೆ ತಮ್ಮ ಕರ್ತವ್ಯಗಳನ್ನು ಮರೆಯಬಾರದು: ಶ್ರೀದೇವಿ ಭಾಯಿ

ವಿದ್ಯಾರ್ಥಿಗಳು ಸ್ವಾತಂತ್ರ್ಯದ ಹಕ್ಕುಗಳೊಂದಿಗೆ ತಮ್ಮ ಕರ್ತವ್ಯಗಳನ್ನು ಮರೆಯಬಾರದು: ಶ್ರೀದೇವಿ ಭಾಯಿ

 

‘ಹಲವಾರು ದೇಶಭಕ್ತರ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಸಂವಿಧಾನ ನಮಗೆ ಹಕ್ಕುಗಳೊಂದಿಗೆ ಕರ್ತವ್ಯಗಳನ್ನೂ ಕೊಟ್ಟಿದೆ. ಆದರೆ, ನಾವು ಕರ್ತವ್ಯಗಳನ್ನು ಮರೆತಿದ್ದೇವೆ. ಕಾನೂನುಗಳನ್ನು ಮುರಿಯುವ ಕೆಲಸ ಮಾಡುತ್ತಿದ್ದೇವೆ. ವಿದ್ಯಾರ್ಥಿಗಳು ಲೈಸನ್ಸ್ ಇಲ್ಲದೆ, ಹೆಲ್ಮೆಟ್ ಇಲ್ಲದೆ ಗಾಡಿ ಓಡಿಸಿ ಅಪಘಾತಕ್ಕೆ ಕಾರಣರಾಗುತ್ತಿದ್ದಾರೆ. ನಾವು ಬದುಕಿ ಇತರರನ್ನು ಗೌವರವಿಸಿ ಬದುಕುವುದೇ ನಿಜವಾದ ಸ್ವಾತಂತ್ರ್ಯ’ ಎಂದು ಸರಕಾರಿ ಪ್ರೌಢಶಾಲೆಯ ವಿಶ್ರಾಂತ ಮುಖ್ಯೋಪಾಧ್ಯಾಯಿನಿ ಶ್ರೀದೇವಿ ಭಾಯಿ ಕೆ. ಎಮ್. ಎ. ಎಸ್ ಸಂಸ್ಥೆ ಏರ್ಪಡಿಸಿದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದರು.

ಬಳಿಕ ಮಾತನಾಡಿದ ಪ್ರಾಂಶುಪಾಲ ಕೆ. ಬಾಲಕೃಷ್ಣ ರಾವ್ ‘ವಿದ್ಯಾರ್ಥಿಗಳು ಸ್ವಾತಂತ್ರಕ್ಕೆ ಹೋರಾಡಿದ ಭಗತ್ ಸಿಂಗ್, ಸುಭಾಸಚಂದ್ರ ಬೋಸ್, ಮೌಲಾನಾ ಅಬ್ದುಲ್ ಕಲಾಂ ಆಜಾದ್, ಮಂಗಲ್ ಪಾಂಡೆ, ಬಿಪಿನ್ ಚಂದ್ರ ಪಾಲ್, ಬಾಲಗಂಗಾಧರ್ ತಿಲಕ್, ಜಾನ್ಸಿರಾಣಿ ಲಕ್ಶ್ಮೀಬಾಯಿ, ತುಳುನಾಡಿನ ರಾಣಿ ಅಬ್ಬಕ್ಕ ಇತ್ಯಾದಿ ಸ್ವಾತಂತ್ರ್ಯ ಸೇನಾನಿಗಳನ್ನು ಮರೆಯಬಾರದು. ಭಾರತ ಎಲ್ಲಾ ಜಾತಿ ಮತ ಧರ್ಮಗಳನ್ನು ಹೊಂದಿರುವ ಏಕೈಕ ಜಾತ್ಯತೀತ ವಿಶೇಷ ದೇಶ. ನಮ್ಮ ದೇಶದ ಮೇಲೆ ವೈರಿಗಳು ಆಕ್ರಮಣ ಮಾಡಿದಾಗ ನಾವು ಜಾತಿ ಮತ ಬೇಧವಿಲ್ಲದೆ ಅವರನ್ನು ಸದೆಬಡೆಯುತ್ತೇವೆ. ಆಪರೇಷನ್ ಸಿಂಧೂರವೇ ಇದಕ್ಕೆ ಉದಾಹರಣೆ’ ಎಂದರು.

ಗಾಂಧೀಜಿ ಮತ್ತು ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರಗಳಿಗೆ ಹೂಗಳನ್ನು ಅರ್ಪಿಸುವುದರ ಮೂಲಕ ಗೌರವರ್ಪಣೆ ನೀಡಲಾಯಿತು. ಮುಖ್ಯ ಅತಿಥಿ ಶ್ರೀದೇವಿ ಭಾಯಿ ರವರಿಗೆ ಪ್ರಾಂಶುಪಾಲರು ಸ್ಮರಣಿಕೆ ನೀಡಿ ಗೌರವಿಸಿದರು.

ಪ್ರೌಢಶಾಲಾ ಮುಖ್ಯಸ್ಥೆ ಶ್ರೀಮತಿ, ಪ್ರಾಥಮಿಕ ಶಾಲಾ ಮುಖ್ಯಸ್ಥೆ ಲೋಲಿಟಾ ಡಿ’ಸಿಲ್ವಾ, ಕಾಲೇಜಿನ ಎಲ್ಲಾ ಉಪನ್ಯಾಸಕರು, ಆಧ್ಯಾಪಕರು, ಕಚೇರಿ ಸಿಬ್ಬಂದಿ, ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರೌಢಶಾಲಾ ಅಧ್ಯಾಪಕಿ ಹಿಲ್ಡಾ ಸ್ವಾಗತಿಸಿದರೆ, ಪ್ರಾಥಮಿಕ ಶಾಲಾ ಶಿಕ್ಷಕಿ ಸುಪ್ರಿಯಾ ಧನ್ಯವಾದ ಸಮರ್ಪಿಸಿದರು. ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ಗುರುಕುಮಾರ್ ಕೆ. ಕಾರ್ಯಕ್ರಮ ನಿರ್ವಹಿಸಿದರು.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments