
ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ಮತ್ತು ಜೇಸಿಐ ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿಯನ್ನು ಜೆಸಿಐ ಇಂಡಿಯಾ ರಾಷ್ಟ್ರೀಯ ತರಬೇತುದಾರಾದ ಜೆಸಿ ಸುಧಾಕರ್ ಪೂಜಾರಿ ಕಾರ್ಕಳ ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಜೆಸಿಐ ಕಾರ್ಕಳ ರೂರಲ್ ಅಧ್ಯಕ್ಷರಾದ ಜೆಸಿ ಅರುಣ್ ಮಾಂಜ, ಜೆಸಿಐ ಕಾರ್ಕಳ ರೂರಲ್ ಪೂರ್ವಾಧ್ಯಕ್ಷರು ಕಾರ್ಯಕ್ರಮದ ಸಂಯೋಜಕರಾದ ಜೆಸಿ ವೀಣಾ ರಾಜೇಶ್, ನಿಕಟ ಪೂರ್ವ ಅಧ್ಯಕ್ಷರಾದ ಜೆಸಿ ಸಂತೋಷ್ ಬಂಗೇರ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಪ್ರೋ| ಗೀತಾ.ಜಿ. ಇವರು ಸ್ವಾಗತಿಸಿದರು. ಜೇಸಿ ವೀಣಾ ರಾಜೇಶ್ ವಂದಿಸಿದರು. ಕು.ದೀಪಾ ಇವರು ಕಾರ್ಯಕ್ರಮ ನಿರೂಪಿಸಿದರು.












