Wednesday, February 4, 2026
Google search engine
Homeಕಾರ್ಕಳಆ. 31 ರಂದು ಜೆಡಿಎಸ್ ನಿಂದ ಧರ್ಮಸ್ಥಳ ಸತ್ಯ ಯಾತ್ರೆ

ಆ. 31 ರಂದು ಜೆಡಿಎಸ್ ನಿಂದ ಧರ್ಮಸ್ಥಳ ಸತ್ಯ ಯಾತ್ರೆ

 

ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜಾತ್ಯತೀತ ಜನತಾದಳವು ‘ಧರ್ಮಸ್ಥಳ ಸತ್ಯ ಯಾತ್ರೆ’ ಕೈಗೊಂಡಿದ್ದು, ಇದೇ ರವಿವಾರ 31 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆ. 31 ರಂದು ಧರ್ಮಸ್ಥಳ ಸತ್ಯ ಯಾತ್ರೆ ಆರಂಭವಾಗುತ್ತದೆ. ಮೊದಲಿಗೆ ಹಾಸನದಲ್ಲಿ ಸೆನ್ಯಾತ್ರ್ ಮಾಡಿದ್ದೇವೆ. ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರು ಆಗಮಿಸಲಿದ್ದು ಅಲ್ಲಿ ತಿಂಡಿ ವ್ಯವಸ್ಥೆ ಮಾಡಿದ್ದೇವೆ. ಅಲ್ಲಿಂದ ನೇತ್ರವತಿಗೆ ಹೋಗಿ ಪಾದಯಾತ್ರೆ ಮಾಡಿದ್ದೇವೆ. ಅಲ್ಲಿ ವೇದಿಕೆ ರಚನೆ ಮಾಡಿದ್ದೇವೆ. ಅಲ್ಲಿಂದ ಪಾದಯಾತ್ರೆ ಮಾಡುತ್ತೇವೆ. ಅಲ್ಲಿ ವೇದಿಕೆ ರಚನೆ ಮಾಡಿದ್ದೇವೆ. ಅಲ್ಲಿಂದ ಕೆಲವು ಸಂದೇಶಗಳನ್ನು ನೀಡುತ್ತೇವೆ ಎಂದು ತಿಳಿಸಿದರು.

ಧರ್ಮಸ್ಥಳಕ್ಕೆ ಅಪಮಾನವೆಸಗಲು ಸರ್ಕಾರ ಮುಂದಾಗಿದೆ. ನಾನು ಒಬ್ಬ ಭಕ್ತನಾಗಿ ಹಾಗೂ ನಮ್ಮ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಧರ್ಮಸ್ಥಳ ಸತ್ಯ ಯಾತ್ರೆ ಮಾಡಿ, ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಅವರಿಗೆ ಬೆಂಬಲ ನೀಡುತ್ತೇವೆ ಎಂದರು.

ಕಳೆದ ಹಲವಾರು ದಿನಗಳಿಂದ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಮಾನ ಹಾಗೂ ಹಲವಾರು ಅನುಮಾನಗಳಿಗೆ ರಾಜ್ಯ ಸರ್ಕಾರ ಎದೆ ಮಾಡಿಕೊಟ್ಟಿದೆ. ತುರಾತುರಿಯಲ್ಲಿ ಎಸ್.ಐ.ಟಿ. ರಚನೆ ಮಾಡಿದೆ. ಧರ್ಮಸ್ಥಳ ಕ್ಷೇತ್ರದ ವಿಷಯದಲ್ಲಿ ಒಂದು ತಂಡವಾಗಿ ಪಿತೂರಿ ಮಾಡಿದ್ದನ್ನು ನೋಡಿದ್ದೇವೆ. ಒಬ್ಬನ ಹೇಳಿಕೆಯನ್ನು ಪರಿಗಣಿಸಿ ಎಸ್. ಐ. ಟಿ. ಯನ್ನು ಯಾಕೆ ರಚನೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು. ಕುಮಾರಸ್ವಾಮಿ ದಿಲ್ಲಿಯಲ್ಲಿದ್ದರೂ ಹೆಗ್ಗಡೆ ಜೊತೆ ಮಾತನಾಡಿ ನೈತಿಕ ಬೆಂಬಲ ನೀಡಿದ್ದಾರೆ ಎಂದರು.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments