ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಶ್ರೀ ನಾರಾಯಣಗುರು ಜಯಂತಿ ಆಚರಣೆ

0

 

ಕಾರ್ಕಳದ ಬಿಜೆಪಿ ಕಚೇರಿಯಲ್ಲಿ ಶ್ರೀ ನಾರಾಯಣ ಗುರು ಜಯಂತಿಯನ್ನು ಭಕ್ತಿ ಮತ್ತು ಗೌರವದಿಂದ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ನವೀನ್ ನಾಯಕ್, ಉಪಾಧ್ಯಕ್ಷ ಅನಂತಕೃಷ್ಣ ಶೆಣೈ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಪ್ರಸಾದ್ ಐಸಿರ, ನಿರಂಜನ್ ಜೈನ್, ಪ್ರಶಾಂತ್ ಕೋಟ್ಯಾನ್, ಅಶೋಕ್ ಸುವರ್ಣ, ರಾಮಚಂದ್ರ ನಾಯಕ್, ರವೀಂದ್ರ ಮೊಯಿಲಿ, ಪ್ರಕಾಶ್ ರಾವ್, ಸುರೇಶ್ ಕಾಬೆಟ್ಟು, ಭಾರತಿ ಅಮೀನ್, ಮೀನಾಕ್ಷಿ ಗಂಗಾಧರ್, ನಗರ ಮಹಿಳಾ ಮೋರ್ಚಾದ ಅಧ್ಯಕ್ಷರು ಮತ್ತಿತರ ಪಕ್ಷದ ಪ್ರಮುಖರು,ಕಾರ್ಯಕರ್ತರು ಮತ್ತು ಸ್ಥಳೀಯರು ಭಾಗವಹಿಸಿ ಗುರುವರ್ಯರ ಸಾಮಾಜಿಕ ಸುಧಾರಣೆ ಹಾಗೂ ಸಮಾನತೆಗಾಗಿ ನೀಡಿದ ಅಮೂಲ್ಯ ಸೇವೆಯನ್ನು ಪುಷ್ಪಾರ್ಚನೆ ಗೈದು ಸ್ಮರಿಸಿದರು.

ಸಾಮಾಜಿಕ ಸುಧಾರಕ, ತತ್ವಜ್ಞಾನಿ ಹಾಗೂ ಧಾರ್ಮಿಕ ನಾಯಕರೆಂದು ಪ್ರಸಿದ್ಧರಾದ ಶ್ರೀ ನಾರಾಯಣ ಗುರುಗಳು, ವರ್ಣ ವ್ಯವಸ್ಥೆಯಿಂದ ಉಂಟಾದ ಅಸಮಾನತೆಗಳನ್ನು ವಿರೋಧಿಸಿ, ಹಿಂದುಳಿದ ಸಮುದಾಯಗಳ ಉದ್ಧಾರಕ್ಕಾಗಿ ಅವರು ಶ್ರಮಿಸಿದರು. “ಒಂದು ಜಾತಿ, ಒಂದು ಧರ್ಮ, ಒಂದು ದೇವರು ಎಲ್ಲರಿಗೂ” ಮಾನವೀಯ ಏಕತೆ ಹಾಗೂ ಸಾಮರಸ್ಯದ ಸಂದೇಶವನ್ನು ಸಾರಿದ್ದರು. ಅವರು ಎಲ್ಲರಿಗೂ ಪ್ರವೇಶಿಸಬಹುದಾದ ದೇವಾಲಯಗಳನ್ನು ಸ್ಥಾಪಿಸಿದರು ಹಾಗೂ ಶಿಕ್ಷಣದ ಮೂಲಕ ಸಮುದಾಯದ ಶಕ್ತಿಯನ್ನು ಹೆಚ್ಚಿಸಲು ಕಾರ್ಯನಿರ್ವಹಿಸಿದರು. ಅವರ ಸೇವೆ ಇಂದು ಕೂಡ ಸಾಮಾಜಿಕ ನ್ಯಾಯದ ಚಳವಳಿಗಳಿಗೆ ಮಾರ್ಗದರ್ಶಿಯಾಗಿದೆ.

ಈ ಕಾರ್ಯಕ್ರಮವು ಸಾಮಾಜಿಕ ಸಮಾನತೆ, ಒಗ್ಗಟ್ಟು ಹಾಗೂ ಸಹಿಷ್ಣುತೆಯನ್ನು ಪ್ರತಿಬಿಂಬಿಸಿತು. ಶ್ರೀ ನಾರಾಯಣ ಗುರುವರ್ಯರ ಜೀವನ ಸಂದೇಶವನ್ನು ಮುಂದುವರಿಸಲು ಎಲ್ಲರಿಗೂ ಪ್ರೇರಣೆ ನೀಡುವಂತಾಯಿತು ಎಂದು ಕಾರ್ಕಳ ಬಿಜೆಪಿ ಕಚೇರಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

   

LEAVE A REPLY

Please enter your comment!
Please enter your name here