ಕ್ರೈಸ್ಟ್ ಕಿಂಗ್: ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ

0

ಸಾರ್ವಜನಿಕ ಶಿಕ್ಷಣ ಇಲಾಖೆ(ಪದವಿ ಪೂರ್ವ), ಕರ್ನಾಟಕ ಸರ್ಕಾರ ಹಾಗೂ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜು ಇವುಗಳ ಆಶ್ರಯದಲ್ಲಿ ಪದವಿಪೂರ್ವ ವಿಭಾಗದ ಕಾರ್ಕಳ ತಾಲೂಕು ಮಟ್ಟದ ಹುಡುಗರ ಮತ್ತು ಹುಡುಗಿಯರ ವಿಭಾಗಗಳ ಫುಟ್ಬಾಲ್ ಪಂದ್ಯಾಟ ಗಾಂಧೀ ಮೈದಾನದಲ್ಲಿ ನಡೆಯಿತು.

ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕಾರ್ಕಳ ಪುರಸಭೆಯ ಅಧ್ಯಕ್ಷರಾದ ಯೋಗೀಶ ದೇವಾಡಿಗ ಇವರು ದೀಪಬೆಳಗಿ ಪಂದ್ಯಾಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಚಾರ್ಯ ಲಕ್ಷ್ಮಿ ನಾರಾಯಣ ಕಾಮತ್ ಅವರು ಮಾತನಾಡಿ ‘ಕಲಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳ ಕಡೆಗೂ ಮಕ್ಕಳು ಮಹತ್ವ ನೀಡಬೇಕು, ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಬೇಕು’ ಎಂದು ಹೇಳಿದರು. ಅತಿಥಿಗಳಾಗಿದ್ದ ರಾಷ್ಟ್ರಮಟ್ಟದ ದೇಹದಾರ್ಡ್ಯ ಪಟು ಕಾರ್ಕಳದ ಪ್ರವೀಣ್ ದೇವಾಡಿಗ ಕ್ರೀಡಾಳುಗಳಿಗೆ ಶುಭ ಹಾರೈಸಿದರು.

ಸಂಸ್ಥೆಯ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ, ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ದಯಾನಂದ ಮಲೆಬೆಟ್ಟು, ಕೆಎಂಇಎಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ಚಂದ್ರ ಹೆಗ್ಡೆ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಪ್ರಕಾಶ್ ನಾಯ್ಕ್ ಸ್ವಾಗತಿಸಿ ಲಾವಣ್ಯ ವಂದಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣಪ್ರಸಾದ್ ಪಂದ್ಯಾಟ ಸಂಘಟಿಸಿದ್ದರು.

   

LEAVE A REPLY

Please enter your comment!
Please enter your name here