Wednesday, February 4, 2026
Google search engine
Homeಕಾರ್ಕಳನಿಟ್ಟೆ: ತಾಂತ್ರಿಕ ಕಾಲೇಜಿನಲ್ಲಿ ನಡೆದ "ರಾಣಿ ಅಬ್ಬಕ್ಕ @500" ಉಪನ್ಯಾಸ

ನಿಟ್ಟೆ: ತಾಂತ್ರಿಕ ಕಾಲೇಜಿನಲ್ಲಿ ನಡೆದ “ರಾಣಿ ಅಬ್ಬಕ್ಕ @500” ಉಪನ್ಯಾಸ

 

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕವು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ (ರಿ.) ಮಂಗಳೂರು ವಿಭಾಗ ಮತ್ತು ರೋಟರಿ ಕ್ಲಬ್, ನಿಟ್ಟೆ ಸಂಯುಕ್ತ ಆಶ್ರಯದಲ್ಲಿ ಸೆ.18 ರಂದು ವೀರ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ದಿನಾಚರಣೆಯ ಅಂಗವಾಗಿ “ರಾಣಿ ಅಬ್ಬಕ್ಕ @500” (100 ಪ್ರೇರಣಾದಾಯಿ ಉಪನ್ಯಾಸಗಳ ಸರಣಿ – 77) ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿಲಾಯಿತು.

ಈ ಕಾರ್ಯಕ್ರಮವನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್ ನ ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಪ್ರೊ. ಯೋಗೀಶ್ ಹೆಗ್ಡೆ ಅವರು ಉದ್ಘಾಟಿಸಿದರು. ಅವರು ತಮ್ಮ ಭಾಷಣದಲ್ಲಿ ರಾಣಿ ಅಬ್ಬಕ್ಕನವರ ಶೌರ್ಯ, ನಾಯಕತ್ವ ಮತ್ತು ದೇಶಭಕ್ತಿಯನ್ನು ವಿವರಿಸಿ, ಅವರನ್ನು ಇಂದಿನ ಯುವಕರಿಗೆ ಸ್ಫೂರ್ತಿದಾಯಕ ಐಕಾನ್ ಎಂದು ತಿಳಿಸಿದರು.

ದಿಕ್ಸೂಚಿ ಭಾಷಣಕಾರರಾಗಿ ಉಪನ್ಯಾಸ ನೀಡಲು ಆಗಮಿಸಿದ್ದ ಕಾರ್ಕಳದ ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಅವರು ವಸಾಹತುಶಾಹಿ ಶಕ್ತಿಗಳನ್ನು ಪ್ರತಿರೋಧಿಸುವಲ್ಲಿ ರಾಣಿ ಅಬ್ಬಕ್ಕ ಅವರ ಗಾಥೆಯ ಬಗೆಗೆ ಮಾತನಾಡಿದರು ಮತ್ತು ಇತಿಹಾಸದಿಂದ ಧೈರ್ಯ ಮತ್ತು ಏಕತೆಯ ಪಾಠಗಳನ್ನು ಕಲಿಯುವ ಅಗತ್ಯವನ್ನು ತಿಳಿಹೇಳಿದರು. ಧೈರ್ಯ, ತ್ಯಾಗ ಮತ್ತು ದೇಶಭಕ್ತಿಯ ಮೌಲ್ಯವನ್ನು ಹೊಂದಿರುವ ಸ್ವಾತಂತ್ರ್ಯ ಹೋರಾಟಗಾರರ ಮೊದಲ ಗುಂಪಿನಲ್ಲಿ ರಾಣಿ ಅಬ್ಬಕ್ಕ ಅವರನ್ನು ಅವರು ಸ್ಮರಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ.ನಿರಂಜನ್ ಎನ್ ಚಿಪ್ಲುಂಕರ್ ಅವರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವೇದಿಕೆಗಳ ಮೂಲಕ ಐತಿಹಾಸಿಕ ಮಹಿಳಾ ನಾಯಕರನ್ನು ಸ್ಮರಿಸುವ ಉಪಕ್ರಮವನ್ನು ಶ್ಲಾಘಿಸಿದರು.

ಎನ್ಎಸ್ಎಸ್ ಘಟಕದ ವಿದ್ಯಾರ್ಥಿನಿ ಶರಣ್ಯ ಸ್ವಾಗತಿಸಿದರು. ಉಡುಪಿಯ ಕೆ.ಆರ್.ಎಂ.ಎಸ್.ಎಸ್. ಅಧ್ಯಕ್ಷ ಡಾ.ಸುರೇಂದ್ರ ಶೆಟ್ಟಿ ಅವರು ಕಾರ್ಯಕ್ರಮದ ಮಹತ್ವದ ಬಗ್ಗೆ ವಿವರಿಸಿದರು. ರೋಟರಿ ಕ್ಲಬ್ ನಿಟ್ಟೆ ಅಧ್ಯಕ್ಷ ಡಾ.ರಘುನಂದನ್ ರಾವ್ ವಂದಿಸಿದರು.

ಈ ಕಾರ್ಯಕ್ರಮದಲ್ಲಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments