Monday, February 2, 2026
Google search engine
Homeಕಾರ್ಕಳಕಾರ್ಕಳ: ಸೇವಾ ಪಾಕ್ಷಿಕ ಅಭಿಯಾನ-ಕುಂಬಾರಿಕೆ ಪರಿಣತರಿಗೆ ಸನ್ಮಾನ

ಕಾರ್ಕಳ: ಸೇವಾ ಪಾಕ್ಷಿಕ ಅಭಿಯಾನ-ಕುಂಬಾರಿಕೆ ಪರಿಣತರಿಗೆ ಸನ್ಮಾನ

 

ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕಾರ್ಕಳ ಮಂಡಲದ ವತಿಯಿಂದ ಸೇವಾಪಾಕ್ಷಿಕ ಅಭಿಯಾನದ ಅಂಗವಾಗಿ ಶ್ರೀಮತಿ ವಿನಯಾ ಡಿ ಬಂಗೇರ ಅವರ ಅಧ್ಯಕ್ಷತೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿಯಲ್ಲಿ ಗ್ರಾಮೀಣ ಭಾಗದ ಕುಶಲಕರ್ಮಿಗಳ ಸ್ಥಳೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಮಾರು 50 ವರ್ಷಗಳಿಂದ ಕುಂಬಾರಿಕೆ ವೃತ್ತಿಯಲ್ಲಿ ತೊಡಗಿರುವ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಕಡಾರಿ ಬೊಗ್ಗು (ಅಣ್ಣು)ಮೂಲ್ಯ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ, ಕುಂಬಾರಿಕೆ ಉತ್ಪನ್ನಗಳನ್ನು ಖರೀದಿಸಲಾಯಿತು.

ಈ ಸಂದರ್ಭದಲ್ಲಿ ಸೇವಾಪಾಕ್ಷಿಕ ಸಂಚಾಲಕ ರವೀಂದ್ರ ಕುಮಾರ್ ಅವರು ಮಾತನಾಡಿ ಗ್ರಾಮೀಣ ಭಾಗದ ಕುಶಲಕರ್ಮಿಗಳನ್ನು ಗುರುತಿಸಿ, ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿ ಕೊಡುವುದರಿಂದ ಪ್ರಧಾನಿ ಮೋದಿಜಿ ಅವರ ಆತ್ಮ ನಿರ್ಭರ ಭಾರತ ಕನಸು ಸಾಕಾರಗೊಳ್ಳುತ್ತದೆ ಎಂದರು.

ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ಅವರು ಮಾತನಾಡಿ, ಸೇವಾ ಪಾಕ್ಷಿಕದ ನಿರಂತರ ಸೇವಾ ಕಾರ್ಯಗಳು ಮಹಿಳಾ ಮೋರ್ಚಾದಿಂದ ನಡೆಯುತ್ತಿದ್ದು, ನಮ್ಮ ಹಿರಿಯರು ಸಾಂಪ್ರದಾಯಿಕ ಮಣ್ಣಿನ ಪಾತ್ರೆಗಳನ್ನು ಉಪಯೋಗಿಸುತ್ತಿದ್ದು, ಇದರಿಂದ ಉತ್ತಮ ಆರೋಗ್ಯ ವೃದ್ಧಿ ಮಾತ್ರವಲ್ಲದೆ ಗ್ರಾಮೀಣ ಭಾಗದ ಆರ್ಥಿಕತೆಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಆ ನಿಟ್ಟಿನಲ್ಲಿ ಮಹಿಳಾ ಮೋರ್ಚಾದ ಕಾರ್ಯ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ಬೋಳ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಕವಿತಾ ಹರೀಶ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಸುಮಾ ರವಿಕಾಂತ್, ವಿನುತಾ ಆಚಾರ್ಯ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಜತ್, ಮಹಿಳಾ ಮೋರ್ಚಾ ನಗರ ಶಕ್ತಿ ಕೇಂದ್ರ ಅಧ್ಯಕ್ಷರಾದ ಮಮತಾ ಸುವರ್ಣ ಪ್ರಧಾನ ಕಾರ್ಯದರ್ಶಿ ಗೀತಾ ಶೆಟ್ಟಿಗಾರ್,,ಮುಡಾರು ಪಂಚಾಯತ್ ಅಧ್ಯಕ್ಷರಾದ ಶೃತಿ ಅದಿಕಾರಿ,ಮಾಳ ಪಂಚಾಯತ್ ಉಪಾಧ್ಯಕ್ಷರಾದ ವಿಮಲ ಪೂಜಾರಿ, ಪಂಚಾಯತ್ ಸದಸ್ಯರುಗಳಾದ ಮಾಲತಿ ನಾಯ್ಕ್, ಸರಸ್ವತಿ ಆಚಾರ್ಯ, ಸುಂದರಿ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಚಿತ್ರಾ, ಶುಭ ಜಗದೀಶ್, ಹರಿಣಿ, ಕುಶಲ, ಮತ್ತಿತರರು ಉಪಸ್ಥಿತರಿದ್ದು ಸಹಕರಿಸಿದರು.
9900782313

 

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments